ಧಾರವಾಡ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಘಟಕ ಕಾಲೇಜುಗಳಿಗೆ 2025-26ನೇ ಸಾಲಿನ ಸ್ನಾತಕ ಕೋರ್ಸ್‌ಗಳಿಗಾಗಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಇತಿಹಾಸ ಮತ್ತು ಭೌತಶಾಸ್ತ್ರ ವಿಷಯಗಳಿಗೆ ಅಗತ್ಯತೆಗನುಗುಣವಾಗಿ ಪೂರ್ಣಾವಧಿ ಹಾಗೂ ಅಲ್ಪಾವಧಿ ಆಧಾರದ ಮೇಲೆ ಬೋಧನೆ ಮಾಡಲು ಈ ನೇಮಕಾತಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 4, 2025ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ವಿಶ್ವವಿದ್ಯಾಲಯದ ಅಧಿಕೃತ…

Read More

ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳುವುದೇ? ಸ್ಮಶಾನಕ್ಕೆ ರಸ್ತೆ ಇಲ್ಲವೆಂದು ಸೊಟಕನಾಳ ಗ್ರಾಮದಲ್ಲಿ ಶವ ಇಟ್ಟು ಪ್ರತಿಭಟನೆ!

ನವಲಗುಂದ: ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆ ಇಲ್ಲದೆ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು, ಅಂತಿಮವಾಗಿ ವೃದ್ಧೆಯ ಶವವನ್ನೇ ಗ್ರಾಮದ ಬಸ್ ನಿಲ್ದಾಣದ ಬಳಿ ಇಟ್ಟು ಪ್ರತಿಭಟನೆ ನಡೆಸಿದ ಹೃದಯವಿದ್ರಾವಕ ಘಟನೆ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಶನಿವಾರ ಜರುಗಿದೆ. ಇದು ಸ್ಥಳೀಯ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ನಿರಂತರ ನಿರ್ಲಕ್ಷ್ಯದ ಪರಾಕಾಷ್ಠೆಯಾಗಿದೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೊಟಕನಾಳ ಗ್ರಾಮಸ್ಥರು ಸ್ಮಶಾನಕ್ಕೆ ಹೋಗುವ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ…

Read More

ಧಾರವಾಡ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮೀತಿ ಅಧ್ಯಕ್ಷ: ಚಂದ್ರಶೇಖರ ಜುಟ್ಟಲ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ

ಕುಂದಗೋಳ: ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಶ್ರೀ ಗೋವಿಂದಪ್ಪ.ಹ. ಜುಟ್ಟಲ್ ಪ್ರತಿಷ್ಠಾನದ ಸಂಸ್ಥಾಪಕರಾದ ಚಂದ್ರಶೇಖರ ಜುಟ್ಟಲ್ ಅವರ ಹುಟ್ಟುಹಬ್ಬವನ್ನು ಸಮಾಜ ಸೇವಾ ಕಾರ್ಯಗಳ ಮೂಲಕ ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಗೋವಿಂದಪ್ಪ.ಹ. ಜುಟ್ಟಲ್ ಪ್ರತಿಷ್ಠಾನ ಹಾಗೂ ಸೇವಾ ಸಮಿತಿ, ಕಮಡೊಳ್ಳಿ ವತಿಯಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು. ಈ ಮೂಲಕ ರೋಗಿಗಳ ಮುಖದಲ್ಲಿ ಸಂತೋಷ ಮೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಬೆಟದೂರ ಗ್ರಾ.ಪಂ….

Read More

ಸಾಲ ಭಾಧೆ ತಾಳಲಾರದೆ ಅಮರಗೋಳದ ರೈತ ಆತ್ಮಹತ್ಯೆ

ನವಲಗುಂದ: ತಾಲ್ಲೂಕಿನ ಅಮರಗೋಳ ಗ್ರಾಮದ ಯುವ ರೈತ ಕಾಂತೇಶ ಯಲ್ಲಪ್ಪ ದೊಡ್ಡಮನಿ (28) ಅವರು ಬೆಳೆ ನಷ್ಟ ಮತ್ತು ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತ ಘಟನೆಯು ತೀವ್ರ ಸಂಕಟವನ್ನುಂಟು ಮಾಡಿದೆ ಎಂದು ನವಲಗುಂದ ಮತಕ್ಷೇತ್ರದ ಮಾಜಿ ಸಚಿವರಾದ ಶಂಕರಪಾಟೀಲ ಮುನೇನಕೊಪ್ಪ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಘಟನೆಯ ವಿವರ:ರೈತ ಕಾಂತೇಶ ದೊಡ್ಡಮನಿ ಅವರು ಕೆವಿಜಿಬಿ ಬ್ಯಾಂಕ್‌ನಲ್ಲಿ ₹4 ಲಕ್ಷ ಮತ್ತು ವಿವಿಧ ಸಂಘಗಳಿಂದ ₹1.5 ಲಕ್ಷ ಸೇರಿ ಅಂದಾಜು ₹5.5 ಲಕ್ಷ ಸಾಲ…

Read More

ಕಬಡ್ಡಿ ಪಂದ್ಯಾವಳಿ – ರೊಟ್ಟಿಗವಾಡ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಗೋಳ: ತಾಲ್ಲೂಕಿನ ರೊಟ್ಟಿಗವಾಡ ಗ್ರಾಮದ ಜಿ.ಕೆ. ಹಿರೇಗೌಡರ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ಆ 28ರಂದು ನಡೆದ 17 ವರ್ಷ ವಯೋಮಿತಿಯ ಶಾಲಾ ಕ್ರೀಡಾಕೂಟದಲ್ಲಿ ಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡಗಳು ವಿಜಯ ಸಾಧಿಸುವ ಮೂಲಕ ಧಾರವಾಡ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಮಿತಿ ಅಧ್ಯಕ್ಷರಾದ ಗಿರೀಶ ಜಿ. ಪಾಟೀಲ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯ ವಿನಯಕುಮಾರ ಕಬನೂರ,…

Read More

ಗ್ರಾಮ ಪಂಚಾಯಿತಿ ಯೋಜನೆಗಳ ಪ್ರಗತಿ ಪರಿಶೀಲನೆ: ಕರ ವಸೂಲಾತಿ ಕುಂಠಿತಕ್ಕೆ ಧಾರವಾಡ ಜಿ ಪಂ ಸಿಇಒ ಭುವನೇಶ್ವರ ಪಾಟೀಲ ಅಸಮಾಧಾನ

ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ್ ಪಾಟೀಲ್ ಅವರು ಗುರುವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಉಪಸ್ಥಿತರಿದ್ದರು. ಸಭೆಯಲ್ಲಿ ಸಿಇಒ ಅವರು ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿ, ಸ್ವಚ್ಛ ಭಾರತ ಮಿಷನ್, ಸಕಾಲ ಸೇವೆಗಳು, ಸಾರ್ವಜನಿಕರ ಕುಂದುಕೊರತೆ ನಿವಾರಣೆ, ತೆರಿಗೆ…

Read More

ಬೆಳೆ ವಿಮೆ ಅವ್ಯವಹಾರ: ಸರ್ಕಾರ, ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ರೈತರ ಆಕ್ರೋಶ; ಡಿ.ಸಿ. ಕಚೇರಿ ಎದುರು ರೈತರ ಧರಣಿ

ಧಾರವಾಡ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಬೆಳೆ ವಿಮೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೇ ಹಾನಿಗೊಂಡ ಹೆಸರು ಕಾಳು ಹಾಗೂ ಉದ್ದು ಬೆಳೆಗಳನ್ನು ಚೆಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ವಿಮೆಯಲ್ಲಿ ಅಧಿಕಾರಿಗಳ ಮ್ಯಾಚ್ ಫಿಕ್ಸಿಂಗ್’:ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸಚಿವ…

Read More

ಕುಂದಗೋಳ ತಹಶೀಲ್ದಾರ ರಾಜು ಮಾವರಕರವರಿಗೆ ಜಿಲ್ಲಾಧಿಕಾರಿಯಿಂದ ಅಭಿನಂದನಾ ಪತ್ರ

ಧಾರವಾಡ: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಭೂ ಸುರಕ್ಷಾ ಯೋಜನೆ’ಯಡಿ ಭೂ ದಾಖಲೆಗಳ ಸ್ಕ್ಯಾನಿಂಗ್ ಹಾಗೂ ಅಪ್‌ಲೋಡಿಂಗ್ ಪ್ರಗತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕುಂದಗೋಳ ತಹಶೀಲ್ದಾರ್ ರಾಜು ಮಾವರಕರ್ ಅವರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ ಅವರು ಅಭಿನಂದನಾ ಪತ್ರವನ್ನು ಸಲ್ಲಿಸಿದ್ದಾರೆ. ಆಗಷ್ಟ್ 28 ರಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಿಡುಗಡೆಯಾದ ಪತ್ರದಲ್ಲಿ ಈ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸಲಾಗಿದೆ. ಜನವರಿ 1, 2025ರಿಂದ ಆಗಸ್ಟ್ 27, 2025ರ ಅವಧಿಯಲ್ಲಿ ಕುಂದಗೋಳ ತಾಲೂಕು…

Read More

ಬೆನಕನಹಳ್ಳಿ: ಬೈಕ್ ಸ್ಕಿಡ್ ಆಗಿ ಬಿದ್ದು ಮಹಿಳೆ ಸಾವು, ಚಾಲಕನಿಗೆ ಗಾಯ

ಕುಂದಗೋಳ: ಅಜಾಗರೂಕತೆಯ ಚಾಲನೆಯಿಂದಾಗಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆನಕನಹಳ್ಳಿ-ಮುಳ್ಳಹಳ್ಳಿ ರಸ್ತೆಯಲ್ಲಿ ನಡೆದಿದೆ. ಆಗಸ್ಟ್ 24ರ ರಾತ್ರಿ 8:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆ ವಿವರಶಿರಗುಪ್ಪಿ ಗ್ರಾಮದ ಶಿವಕುಮಾರ್ (28) ಎಂಬಾತನು ಕೆಎ-63/ಎಲ್-7661 ಸಂಖ್ಯೆಯ ತನ್ನ ಮೋಟಾರ್‌ಸೈಕಲ್‌ನಲ್ಲಿ ಬೆನಕನಹಳ್ಳಿ ಕಡೆಯಿಂದ ಮುಳ್ಳಹಳ್ಳಿ ಕಡೆಗೆ ವಾಹನ ಚಲಾಯಿಸುತ್ತಿದ್ದನು. ಈ ಸಂದರ್ಭದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆಯ ಮೇಲೆ ಬಿದ್ದಿದೆ. ಇದರ ಪರಿಣಾಮ, ಬೈಕ್‌ನ…

Read More

ಕಳ್ಳರ ವಿಫಲ ಯತ್ನ: ಬ್ಯಾಂಕ್ ದರೋಡೆ ಯತ್ನ ವಿಫಲ, ಬೀಟ್ ಪೊಲೀಸರಿಂದ ಕಳ್ಳರು ಪರಾರಿ

ಧಾರವಾಡ: ನಗರದ ಹೃದಯಭಾಗದಲ್ಲಿರುವ ಶ್ರೀನಗರ ಸರ್ಕಲ್ ಬಳಿ ಇರುವ ಕರ್ನಾಟಕ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರ ತಂಡವೊಂದು ಪೊಲೀಸರ ಸಮಯಪ್ರಜ್ಞೆಯಿಂದಾಗಿ ವಿಫಲವಾಗಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕಿನ ಶಟರ್ ಮುರಿಯುವ ಪ್ರಯತ್ನದಲ್ಲಿರುವಾಗಲೇ ಪೊಲೀಸರು ಸ್ಥಳಕ್ಕೆ ಬಂದಿದ್ದರಿಂದ ದರೋಡೆ ತಪ್ಪಿದೆ. ಗಣೇಶ ಹಬ್ಬದ ಕಾರಣ ನಗರದಲ್ಲಿ ತಡರಾತ್ರಿಯವರೆಗೂ ಜನರ ಓಡಾಟ ಇತ್ತು. ಆದರೂ, ಕಳ್ಳರು ಈ ಕೃತ್ಯಕ್ಕೆ ಕೈ ಹಾಕಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳ್ಳತನದ ಯತ್ನದ ಕುರಿತು ಬ್ಯಾಂಕ್ ಅಧಿಕಾರಿಗಳಿಗೆ ಪೊಲೀಸರೇ ಮಾಹಿತಿ…

Read More