ಗಣೇಶ-ಈದ್ ಮಿಲಾದ್: ಹಬ್ಬದ ನಿಮಿತ್ತ ಧಾರವಾಡ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ
ಧಾರವಾಡ: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಆಗಸ್ಟ್ 26ರ ರಾತ್ರಿ 11:59 ರಿಂದ ಆಗಸ್ಟ್ 28ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 28ರ ರಾತ್ರಿ 11:59 ರಿಂದ ಆಗಸ್ಟ್ 30ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 30ರ ರಾತ್ರಿ 11:59 ರಿಂದ…

