ಸೆ:13 ರಂದು ಲೋಕ ಅದಾಲತ್ ಹಾಗೂ ಸಂಚಾರಿ ದಂಡ ರಿಯಾಯಿತಿ ಸದ್ಬಳಕೆಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ. ಎಸ್ ಭಾರತಿ ಕರೆ

ಧಾರವಾಡ: ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಕಕ್ಷಿದಾರರು ಮತ್ತು ನ್ಯಾಯವಾದಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಅವರು ತಿಳಿಸಿದ್ದಾರೆ. ಜೊತೆಗೆ, ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ದಂಡದ ಮೊತ್ತದಲ್ಲಿ ಶೇ. 50 ರಿಯಾಯಿತಿಯನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ…

Read More

ಗಾಂಧಿಜೀ ನಡೆ-ನುಡಿಗಳಂತೆಯೇ ಬದುಕು ರೂಪಿಸಿಕೊಳ್ಳಿ: ಜಿ ಪಂ ಸಿಇಒ:ಭುವನೇಶ ಪಾಟೀಲ

ಧಾರವಾಡ: ಮಹಾತ್ಮ ಗಾಂಧೀಜಿಯವರು ತಮ್ಮ ಬದುಕಿನಲ್ಲಿ ನುಡಿದಂತೆ ನಡೆದು, ನಡೆದಂತೆ ನುಡಿದ ಆದರ್ಶ ವ್ಯಕ್ತಿತ್ವ. ಅವರ ಸ್ಮರಣೆಯ ಜೊತೆಗೆ, ಅವರ ಜೀವನ ಸಂದೇಶಗಳು ಮತ್ತು ಸಂಸ್ಕಾರಗಳನ್ನು ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾ ಪೂಜಿ ಪ್ರಬಂಧ ಸ್ಪರ್ಧೆ’ಯ ಜಿಲ್ಲಾ…

Read More

ಮುಸ್ಲಿಂ ಸಮಾಜದ ವತಿಯಿಂದ ಈದ್ ಮಿಲಾದ್ ಹಬ್ಬದ ಸಂಭ್ರಮ

ಕುಂದಗೋಳ: ಈದ್ ಮಿಲಾದ ಹಬ್ಬದ ನಿಮಿತ್ತ ಪಟ್ಟಣದ ಶಿವಾಜಿನಗರದ ಹೈದರವಲಿ ದರ್ಗಾ ಓಣಿಯಲ್ಲಿ ಶುಕ್ರವಾರ ಮುಸ್ಲಿಂ ಸಮುದಾಯದ ವತಿಯಿಂದ ಮಹಮ್ಮದ್ ಪೈಗಂಬರ್ ಹುಟ್ಟು ಹಬ್ಬದ ಪ್ರಯುಕ್ತ ಸಮಾಜದವರು ಸಿಹಿಹಂಚಿ ಸಂಭ್ರಮಿಸಿದರು. ಪಟ್ಟಣದಲ್ಲಿ ಜೂಲುಸ್ ಮೆರವಣಿಗೆಯನ್ನು ಭಕ್ತಿ ಭಾವದಿಂದ ಮೂಲಕ ಸ್ವಾಗತ ಕೊರಿದರು, ಈ ಸಂದರ್ಭದಲ್ಲಿ ಧರ್ಮಗುರು ಅಬೇದಲಿ ಮಂಕಾದರ, ಪ ಪಂ ಸದಸ್ಯ ವಾಗೀಶ ಗಂಗಾಯಿ, ದರ್ಗಾ ಕಮೀಟಿ ಅಧ್ಯಕ್ಷ ಎಂ ಎಂ ಮಂಕಾದರ, ಬಾಬಾ ಜಂಗ್ಲಿ, ಮಾಬು ಠಪಾಲ,ಮುನ್ನಾ ಜಾಗೀರದಾರ,ಸಲೀಂ ಜಾಗೀರದಾರ, ಅನ್ವರಲಿ ಮಂಕದರ, ರಸುಲ್…

Read More

ರೀಲ್ಸ್‌ ಬದಲು ರಿಯಲ್‌ ಆಗಿ ಜೀವನ ರೂಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಗ್ಯಾರಂಟಿ ಯೋಜನೆ ತಾ ಅಧ್ಯಕ್ಷ ಶಿವಾನಂದ ಬೆಂತೂರ ಕರೆ

ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿರುವ ಕೆ.ಎಲ್.ಇ. ಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿಗಳ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೂಲಿನಾಲಿ ಮಾಡಿ ಬದುಕು ಸಾಗಿಸಬಾರದು, ಬದಲಾಗಿ ಚೆನ್ನಾಗಿ ಓದಿ ಏನಾದರೂ ಸಾಧಿಸಬೇಕೆಂಬುದು ನಿಮ್ಮ ಹೆತ್ತವರ ಆಶಯವಾಗಿದೆ. ಅದನ್ನು ವಿದ್ಯಾರ್ಥಿಗಳು ಈಡೇರಿಸಬೇಕು” ಎಂದರು. ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕೆ.ಎಲ್.ಇ. ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು…

Read More

ಗರ್ಭಾವಸ್ಥೆಯಲ್ಲಿ ಮಹಿಳೆಯರು ಅನುಭವಿಸುವ ನೋವು ಪುನರ್ಜನ್ಮಕ್ಕೆ ಸಮ: ನ್ಯಾಯಾಧೀಶೆ ಶ್ರೀ ಮತಿ ಗಾಯತ್ರಿ

ಕುಂದಗೋಳ: ಗರ್ಭಿಣಿಯಾದಾಗ ಮಹಿಳೆಯರು ಅನುಭವಿಸುವ ನೋವು ಮತ್ತು ದೈಹಿಕ ಬದಲಾವಣೆಗಳು ನಿಜಕ್ಕೂ ಪುನರ್ಜನ್ಮಕ್ಕೆ ಸಮ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಕುಂದಗೋಳ ಘಟಕದ ಸದಸ್ಯರಾದ ಶ್ರೀ ಮತಿ ಗಾಯತ್ರಿ ಅವರು ಹೇಳಿದರು. ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಸಿಡಿಪಿಓ ಕಚೇರಿಯಲ್ಲಿ ನಡೆದ ವಿಶ್ವ ಪೌಷ್ಟಿಕಾಂಶ ದಿನಾಚರಣೆಯ ಕಾರ್ಯಕ್ರಮದಲ್ಲಿಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಹೆಣ್ಣು ಮಕ್ಕಳಿಗೆ…

Read More

ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ವಿವಿಧ ತರಬೇತಿಗೆ ಆಹ್ವಾನ: ಧಾರವಾಡದಲ್ಲಿ ವಿವಿಧ ಕಾರ್ಯಕ್ರಮ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಸೆಪ್ಟೆಂಬರ್ 2025ರ ಮಾಹೆಯಲ್ಲಿ ರೈತರು ಹಾಗೂ ಪಶುವೈದ್ಯಾಧಿಕಾರಿಗಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತರಬೇತಿಗಳ ವಿವರಗಳು ಹೀಗಿವೆ: ಇದರ ಜೊತೆಗೆ, ಸೆಪ್ಟೆಂಬರ್ 26ರಂದು ಧಾರವಾಡ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳಿಗೆ ಪುನಃಶ್ಚೇತನ ತರಬೇತಿಯನ್ನು ಏರ್ಪಡಿಸಲಾಗಿದೆ. ಆಸಕ್ತ ರೈತರು ಹಾಗೂ ಅಧಿಕಾರಿಗಳು ಈ ತರಬೇತಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಇಲಾಖೆ ವಿನಂತಿಸಿಕೊಂಡಿದೆ.

Read More

ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ: ಹೊಸ ಯೋಜನೆಗೆ ಸಿದ್ದತೆ

ಕುಂದಗೋಳ: ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏಕ್ ಪ್ರಯಾಸ ಎಂಬ ಸಂಸ್ಥೆಯ ಬುದ್ಧಿಮಾಂದ್ಯ ಹಾಗೂ ಅಂಧ ನ್ಯೂನತೆವುಳ್ಳ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಮಾತನಾಡಿದ ತಾಲೂಕು ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷ ಹಾಗೂ ಸಂಶಿ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ನಾಯ್ಕರ, ವಿಶೇಷ ಚೇತನ ಮಕ್ಕಳ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಂಸ್ಥೆಯು ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಇದರ ಅಡಿಯಲ್ಲಿ ಕುಂದಗೋಳ ತಾಲೂಕಿನಾದ್ಯಂತ ವಿಶೇಷ…

Read More

ಕರ್ತವ್ಯ ಲೋಪ: ನವಲಗುಂದ ತಾ: ಕುಮಾರಕೋಪ್ಪ ಗ್ರಾಮ ಆಡಳಿತಾಧಿಕಾರಿ (ತಲಾಟಿ)ಅಮಾನತ್ತು

ಧಾರವಾಡ: ಕರ್ತವ್ಯ ನಿರ್ಲಕ್ಷ್ಯ ಮತ್ತು ಸರ್ಕಾರದ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಗಜೇಶ ದೇಸಾಯಿ ಅವರನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆಧಾರ್ ಸೀಡಿಂಗ್ ಮತ್ತು ಪೌತಿ ಆಂದೋಲನದ ಪ್ರಗತಿ ಪರಿಶೀಲನೆಗಾಗಿ ಆಗಸ್ಟ್ ೨೮ರಂದು ನಡೆಸಿದ್ದ ಸಭೆಗೆ ಗಜೇಶ ದೇಸಾಯಿ ಅವರು ಯಾವುದೇ ಮಾಹಿತಿ ನೀಡದೆ ಅನಧಿಕೃತವಾಗಿ ಗೈರಾಗಿದ್ದರು. ಅವರ ಈ ಅನುಪಸ್ಥಿತಿಯಿಂದಾಗಿ ಇ-ಪೌತಿ ಕಾರ್ಯಕ್ರಮದ ಪ್ರಗತಿಗೆ ಹಿನ್ನಡೆಯಾಗಿತ್ತು ಎಂದು ಜಿಲ್ಲಾಧಿಕಾರಿಗಳು ತಮ್ಮ…

Read More

ಧಾರವಾಡದಲ್ಲಿ ದಸರಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಧಾರವಾಡ: ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶುಕ್ರವಾರದಂದು ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು, ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮಹತ್ವವನ್ನು ಒತ್ತಿಹೇಳಿ, ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡರು. “ಗೆಲುವು-ಸೋಲು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ” ಎಂಬ ತಮ್ಮ ಜೀವನ ಪಾಠವನ್ನು ಅವರು ಕ್ರೀಡಾಪಟುಗಳಿಗೆ ತಿಳಿಸಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಆಗಮನವಾಯಿತು. ಇದು ಕ್ರೀಡಾಕೂಟಕ್ಕೆ ಹೊಸ ಹುರುಪು ನೀಡಿತು….

Read More

ಯಾಳಿವಾಳ ಗ್ರಾಮದಲ್ಲಿ 1500ನೇ ಈದ್ ಮಿಲಾದ್ ಉನ್ ನಬಿ ಭವ್ಯ ಆಚರಣೆ

ಯಾಳಿವಾಳ (ಕುಂದಗೋಳ): ಪ್ರವಾದಿ ಮಹಮ್ಮದ್ (ಸ.ಅ) ಅವರ ಜನ್ಮದಿನಾಚರಣೆಯ ಅಂಗವಾಗಿ, ಯಾಳಿವಾಳ ಗ್ರಾಮದಲ್ಲಿ 1500ನೇ ಈದ್ ಮಿಲಾದ್ ಉನ್ ನಬಿ ಹಬ್ಬವನ್ನು ಶುಕ್ರವಾರ ಭಕ್ತಿ–ಭಾವಪೂರ್ಣವಾಗಿ ಮತ್ತು ಭವ್ಯವಾಗಿ ಆಚರಿಸಲಾಯಿತು. ಗ್ರಾಮಸ್ಥರು ಈ ಮಹತ್ವದ ದಿನವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಜುಮ್ಮಾ ಮಸೀದಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಯುವ ಸಮಿತಿಯ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ನಾತ್‌ ಶರೀಫ್ ಗಾಯನ…

Read More