ಕುಂದಗೋಳ: ತಹಶಿಲ್ದಾರ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸೆ:11 ರಂದು ಪೂರ್ವಭಾವಿ ಸಭೆ

ಕುಂದಗೋಳ: ತಾಲ್ಲೂಕಿನಲ್ಲಿ 2025-26ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಮಿತ್ತ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 11, ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7, 2025 ರಂದು ನಡೆಯಲಿರುವ ಜಯಂತಿ ಆಚರಣೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ತಾಲ್ಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಮುಖಂಡರುಗಳು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು…

Read More

ಗುಡೇನಕಟ್ಟಿ: ಶಾಂತ ಮನಸ್ಸಿನಿಂದ ಸುಖ ಜೀವನ – ಡಾ. ಎ.ಸಿ. ವಾಲಿ ಗುರೂಜಿ

ಕುಂದಗೋಳ: ದೇಹ ಮತ್ತು ಚಿಂತೆ ಮನುಷ್ಯನನ್ನು ಹಾಳು ಮಾಡುತ್ತದೆ. ದೇಹವನ್ನು ದಣಿಸಿದಾಗ ಜೀವನ ಸುಖವಾಗಿ ಇರುತ್ತದೆ ಎಂದು ಬಂಡಿವಾಡ ಗಿರೀಶ ಆಶ್ರಮದ ಎ.ಸಿ. ವಾಲಿ ಗುರೂಜಿ ಹೇಳಿದರು. ತಾಲೂಕಿನ ಗುಡೇನಕಟ್ಟಿ ಗ್ರಾಮದ ಏಕದಂತ ಯುವಕ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಗಣೇಶ ಪೂಜೆ ಮತ್ತು ನಿರಂತರ ವೀಣೆ ಸಾಧನ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ನೀವೆಲ್ಲರೂ ಸೇರಿ ಇದೇ ರೀತಿ ಕಾರ್ಯಕ್ರಮವನ್ನು ಪ್ರತಿ ವರ್ಷ ಮಾಡುತ್ತಾ ಬಂದರೆ ನಿಮ್ಮ ಊರಿನ ವಿಘ್ನಗಳು ದೂರವಾಗುತ್ತವೆ. ವಿನಾಯಕನ ಆಶೀರ್ವಾದ ಸದಾ ನಿಮ್ಮ…

Read More

ಕುಂದಗೋಳ: ಅತಿವೃಷ್ಟಿ; ರೈತರು ಧೃತಿಗೆಡಬೇಡಿ, ಸರ್ಕಾರದಿಂದ ಸೂಕ್ತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಅಭಯ

ಕುಂದಗೋಳ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಹೆಸರು, ಉದ್ದು ಸೇರಿದಂತೆ ಬಹುತೇಕ ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಭರವಸೆ ನೀಡಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅತಿವೃಷ್ಟಿಯಿಂದಾದ ಬೆಳೆಹಾನಿಯ ಕುರಿತು ಮಾಹಿತಿ ನೀಡಿದರು. “ಈ ಬಾರಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಸಕಾಲದಲ್ಲಿ ಬಿತ್ತನೆ ಮಾಡಿದ್ದರು. ಬೆಳೆಯೂ…

Read More

ನವಲಗುಂದದಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರ ಹಿತ ಕಾಯಲು ಬದ್ಧ-ಶಾಸಕ ಕೋನರಡ್ಡಿ

ನವಲಗುಂದ: ರಾಜಕೀಯ ಜೀವನದಲ್ಲಿ ನಾವು ಭವಿಷ್ಯ ಕಾಣಲು ಪತ್ರಕರ್ತರ ನಿಸ್ವಾರ್ಥ ಕೊಡುಗೆ ಅಪಾರವಾಗಿದ್ದು, ಅವರ ಹಿತ ಕಾಯಲು ನಾನು ಬದ್ಧ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು. ಪಟ್ಟಣದ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಹಾಗೂ ಪತ್ರಿಕಾ ವಿತರಕರ ಸಂಘ ಆಯೋಜಿಸಿದ್ದ ಪತ್ರಕರ್ತರ ಮತ್ತು ವಿತರಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಸರ್ಕಾರಿ ಮಟ್ಟದಲ್ಲಿ ಉತ್ತಮ ಆಡಳಿತ ನಿರ್ಮಾಣಕ್ಕೆ ದೊಡ್ಡ ಪಾತ್ರ ವಹಿಸುತ್ತದೆ. ಪತ್ರಕರ್ತರ ಸಾಮಾಜಿಕ ಸೇವೆಗೆ…

Read More

ಕುಂದಗೋಳದ ಶಕ್ತಿ ಕ್ಲಿನಿಕ್‌ನಲ್ಲಿ ಸೆ:4 ರಂದು ಉಚಿತ ಬಂಜೆತನ ತಪಾಸಣಾ ಶಿಬಿರ

ಕುಂದಗೋಳ: ಪಟ್ಟಣದ ರೇವಡಿಗಾರ ಕಾಂಪ್ಲೆಕ್ಸ್‌ನಲ್ಲಿರುವ ಶಕ್ತಿ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಆವರಣದಲ್ಲಿ ಸೆಪ್ಟೆಂಬರ್ 4ರಂದು ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನೋವಾ ಐವಿಎಫ್ ಫರ್ಟಿಲಿಟಿ ಸಹಯೋಗದೊಂದಿಗೆ ಈ ಶಿಬಿರವನ್ನು ನಡೆಸಲಾಗುತ್ತಿದೆ.ಅಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಂಜೆತನ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುತ್ತದೆ. ಬಂಜೆತನ ಎನ್ನುವದು ಒಂದು ಚಿಕಿತ್ಸೆ ಪಡೆಯಬಹುದಾದ ವೈದ್ಯಕೀಯ ಸ್ಥಿತಿ ಎಂದು ತಜ್ಞರು ತಿಳಿಸಿದ್ದಾರೆ. ಶಿಬಿರದಲ್ಲಿ ನುರಿತ ಫರ್ಟಿಲಿಟಿ ತಜ್ಞರು ಉಪಸ್ಥಿತರಿದ್ದು, ಉಚಿತ ಸಮಾಲೋಚನೆ, ನೋಂದಣಿ…

Read More

ಶವವಿಟ್ಟು ಪ್ರತಿಭಟನೆಗೆ ಎಚ್ಚರಿಕೆ: ಸ್ಮಶಾನಕ್ಕೆ ರಸ್ತೆ ಇಲ್ಲ; ಗ್ರಾಮಸ್ಥರಿಗೆ ‘ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ! ಸೋಟಕನಾಳ ಗ್ರಾಮಸ್ಥರ ಗೋಳು

ನವಲಗುಂದ :ತಾಲೂಕಿನ ಸೊಟಕನಾಳ ಗ್ರಾಮಸ್ಥರ ಗೋಳು. ಸರ್ಕಾರ ಸ್ಮಶಾನಕ್ಕೆ ಜಾಗ ನೀಡಿದರೂ, ಅಲ್ಲಿಗೆ ಹೋಗಲು ರಸ್ತೆ ಇಲ್ಲ. ಈ ವಿಷಯದ ಬಗ್ಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ಬಾರಿ ಮೃತ ದೇಹವನ್ನು ಜಿಲ್ಲಾಧಿಕಾರಿ ಕಚೇರಿ ಮುಂದೆ ಇಟ್ಟು ಪ್ರತಿಭಟಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶನಿವಾರ “ಪಬ್ಲಿಕ್ ಸಮಾಚಾರ” ವೆಬ್ ನ್ಯೂಸ್‌ನಲ್ಲಿ ಪ್ರಕಟವಾದ ವರದಿಯ ಮುಂದುವರೆದ ಭಾಗವಾಗಿ, ಗ್ರಾಮಸ್ಥರು ಸೋಮವಾರ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಶಾಸಕರ ವಿರುದ್ಧ ರೈತ ಮುಖಂಡ ವೀರನಗೌಡ…

Read More

ಅಣ್ಣಿಗೇರಿ ಪುರಸಭೆ ಸಭೆಯಲ್ಲಿ ಗದ್ದಲ, ಕಿತ್ತಾಟ: ಶಾಸಕರ ಸಮ್ಮುಖದಲ್ಲೇ ಭಿನ್ನಮತ ಸ್ಫೋಟ

ಅಣ್ಣಿಗೇರಿ: (ಧಾರವಾಡ) ಸ್ಥಳೀಯ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದ್ದ ಅಣ್ಣಿಗೇರಿ ಪುರಸಭೆಯ ವಿಶೇಷ ಸಾಮಾನ್ಯ ಸಭೆ, ಸೋಮವಾರ ಜನಪ್ರತಿನಿಧಿಗಳ ನಡುವಿನ ಭಿನ್ನಮತ ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟದೊಂದಿಗೆ ಭಾರಿ ಗದ್ದಲಕ್ಕೆ ಕಾರಣವಾಯಿತು. ಶಾಸಕ ಎನ್.ಹೆಚ್.ಕೋನರಡ್ಡಿ ಅವರ ಸಮ್ಮುಖದಲ್ಲೇ ಕೆಲವು ಸದಸ್ಯರು ವಾಕ್ಸಮರ ನಡೆಸಿ ಸಭೆಯಿಂದ ಹೊರ ನಡೆದ ಪ್ರಸಂಗಗಳು ಜರುಗಿದವು. ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12ಕ್ಕೂ ಹೆಚ್ಚು ವಿಷಯಗಳ ಬಗ್ಗೆ ಚರ್ಚೆ ನಡೆಸಿ ಅನುಮೋದನೆ ನೀಡಲಾಯಿತು. ಆದರೆ, ಸ್ಥಾಯಿ ಸಮಿತಿ…

Read More

ಹುಬ್ಬಳ್ಳಿ ಧಾರವಾಡ: ಬ್ರೇಕ್ ಫೇಲ್: ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್, ಚಾಲಕ ಪಾರು

ಧಾರವಾಡ: ಬ್ರೇಕ್ ಫೇಲ್ ಆದ ಕಾರಣ ಕಸ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಬಿಆರ್‌ಟಿಎಸ್ ರಸ್ತೆಯ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್, ಜೆಎಸ್‌ಎಸ್ ಕಾಲೇಜು ಸಮೀಪ ಬರುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್, ಬಿಆರ್‌ಟಿಎಸ್ ಮಾರ್ಗಕ್ಕೆ ನುಗ್ಗಿ ರಸ್ತೆಯ ಬದಿಯಲ್ಲಿದ್ದ ಬ್ಯಾರಿಕೇಡ್‌ಗೆ ಅಪ್ಪಳಿಸಿದೆ.ಅಪಘಾತದ ರಭಸಕ್ಕೆ…

Read More

ಕಲಘಟಗಿಯಲ್ಲಿ ಅಹವಾಲು ಸ್ವೀಕಾರ; ಮಳೆ, ಪ್ರಾಣಿ ಹಾನಿ ಬೆಳೆ ಪರಿಹಾರಕ್ಕೆ ಕ್ರಮ: ಸಚಿವ ಸಂತೋಷ್ ಲಾಡ್

ಕಲಘಟಗಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಸೋಮವಾರದಂದು ಕಲಘಟಗಿ ತಾಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅಲೆಮಾರಿ ಸಮುದಾಯದವರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೆ, ಅತಿವೃಷ್ಟಿ ಹಾಗೂ ಕಾಡು ಪ್ರಾಣಿಗಳಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲೆಮಾರಿಗಳಿಗೆ ಸೂರು ಭರವಸೆಕಲಘಟಗಿ ಪಟ್ಟಣ ಪಂಚಾಯಿತಿ ಕಟ್ಟಡ ಮತ್ತು ಗ್ರಂಥಾಲಯ ನಿರ್ಮಾಣಕ್ಕೆ ಮೀಸಲಾದ ಜಾಗದಲ್ಲಿ ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದ ಅಲೆಮಾರಿ ಕುಟುಂಬಗಳನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು….

Read More

ಕೃಷಿ ಮೇಳ ಸಿದ್ಧತೆ ಪರಿಶೀಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ: ಸೆಪ್ಟೆಂಬರ್ 13 ರಿಂದ 16 ರವರೆಗೆ ನಡೆಯಲಿರುವ ಧಾರವಾಡ ಕೃಷಿ ಮೇಳದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ವೀಕ್ಷಿಸಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮೇಳದ ಸಿದ್ಧತೆಗಳ ಬಗ್ಗೆ ಅವರು ವಿಶ್ವವಿದ್ಯಾಲಯದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಸ್ಟಾಲ್‌ಗಳ ಅಳವಡಿಕೆ, ಜಾನುವಾರು ಮತ್ತು ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮಳಿಗೆಗಳು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಖ್ಯ ವೇದಿಕೆಯ ಸಿದ್ಧತೆಗಳ ಕುರಿತು ಸಚಿವರು ಪರಿಶೀಲನೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಿದರು. ಕೃಷಿ ವಿಶ್ವವಿದ್ಯಾಲಯದ…

Read More