ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ: ಕುಂದಗೋಳದಿಂದಲೇ ಕಾಮಗಾರಿ ಆರಂಭಿಸಲು ಶಾಸಕ ಎಂ.ಆರ್. ಪಾಟೀಲ್ ಸದನದಲ್ಲಿ ಆಗ್ರಹ
ಧಾರವಾಡ/ಕುಂದಗೋಳ : ಪ್ರತಿ ವರ್ಷ ಪ್ರವಾಹದಿಂದ ರೈತರಿಗೆ ಅಪಾರ ನಷ್ಟ ಉಂಟುಮಾಡುತ್ತಿರುವ ಬೆಣ್ಣೆಹಳ್ಳದ ಉಪಹಳ್ಳಗಳ ಕಾಮಗಾರಿಯನ್ನು ನವಲಗುಂದ ತಾಲ್ಲೂಕಿನ ಬದಲಿಗೆ ಪ್ರವಾಹದ ಮೂಲವಾದ ಕುಂದಗೋಳ ತಾಲ್ಲೂಕಿನಿಂದಲೇ ಆರಂಭಿಸಬೇಕು ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಸದನದಲ್ಲಿ ಆಗ್ರಹಿಸಿದ್ದಾರೆ. ಬೆಣ್ಣೆಹಳ್ಳಕ್ಕೆ ಉಪಹಳ್ಳಗಳಾದ ಕಗ್ಗೋಡಿ, ಗೂಗಿ, ದೇಸಾಯಿ ಮತ್ತು ಮಾಸ್ತಿ ಹಳ್ಳಗಳಿಂದ ದೊಡ್ಡ ಪ್ರಮಾಣದ ಪ್ರವಾಹ ಉಂಟಾಗುತ್ತದೆ. ಇದು ಕುಂದಗೋಳ ತಾಲ್ಲೂಕಿನ 33 ಕಿ.ಮೀ. ವಿಸ್ತಾರ ಹೊಂದಿದ್ದು, 17 ಗ್ರಾಮಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕರು ಗಮನ ಸೆಳೆದರು….

