ಧಾರವಾಡ: ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಫಂಡಿಂಗ್ – ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಆರೋಪ
ಧಾರವಾಡ: ಕಿತ್ತೂರಿನ ಐ.ಬಿ.ಯಲ್ಲಿ ಮಂಗಳವಾರ ದಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಚಲನಕ್ಕೆ ಕಾರಣವಾಯಿತು. ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ವೇಳೆ, ಧಾರವಾಡ ಗ್ರಾಮೀಣ ಭಾಗದ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರುವ ಮೂಲಕ ಅಧಿಕಾರಿಗಳಿಗೆ ಚಾಟಿ ಬೀಸಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಲಾಖೆಯ ಒಳಗಿನ ಕರಾಳ ಮುಖವನ್ನು…

