‘ಮೈ ಪಬ್ಲಿಕ್ ಸಮಾಚಾರ’ ವಿಶೇಷ ವರದಿ ಪರಿಣಾಮ: ಕಲ್ಮೇಶ್ವರ ನಗರಕ್ಕೆ KUIDFC ಅಧಿಕಾರಿಗಳ ಭೇಟಿ, ನೀರಿನ ಗೊಂದಲಕ್ಕೆ ತೆರೆ

ಹುಬ್ಬಳ್ಳಿ:ಹಳೇ ಹುಬ್ಬಳ್ಳಿಯ ಕಲ್ಮೇಶ್ವರ ನಗರದಲ್ಲಿ ಮಣ್ಣು ಮಿಶ್ರಿತ ನೀರು ಸರಬರಾಜಾಗುತ್ತಿರುವ ಕುರಿತು ‘ಮೈ ಪಬ್ಲಿಕ್ ಸಮಾಚಾರ’ ಸುದ್ದಿ ಸಂಸ್ಥೆಯು ರವಿವಾರ ವಿಶೇಷ ವರದಿಯನ್ನು ಪ್ರಸಾರ ಮಾಡಿತ್ತು. ಸಾರ್ವಜನಿಕರ ಸಮಸ್ಯೆಯನ್ನು ಬಿಂಬಿಸಿದ ಈ ಸುದ್ದಿಗೆ ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸಿದೆ. ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ KUIDFC ಇಲಾಖೆಯ ಅಧಿಕ್ಷಕ ಅಭಿಯಂತರರಾದ ಸವಿತಾ ಕಟಿಗೆಣ್ಣವರ ಹಾಗೂ ಅವರ ತಾಂತ್ರಿಕ ತಂಡವು ಸೋಮವಾರ ಕಲ್ಮೇಶ್ವರ ನಗರಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸ್ಥಳದಲ್ಲೇ ನಿಂತು ಸ್ವಚ್ಛವಾದ ನೀರು ಸರಬರಾಜಾಗುವಂತೆ ಕ್ರಮ…

Read More

ಹುಬ್ಬಳ್ಳಿ: ಕಲ್ಮೇಶ್ವರ ನಗರದಲ್ಲಿ ರಾಡಿ ಮಿಶ್ರಿತ ಕಲುಷಿತ ನೀರು ಪೂರೈಕೆ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಿವಾಸಿಗಳು, ಉಗ್ರ ಹೋರಾಟದ ಎಚ್ಚರಿಕೆ!

ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಭಾಗದ ಕಲ್ಮೇಶ್ವರ ನಗರದ 1, 2 ಮತ್ತು 3ನೇ ಕ್ರಾಸ್‌ಗಳ ನಿವಾಸಿಗಳು ಕುಡಿಯುವ ನೀರಿಗಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ವಾರಕ್ಕೊಮ್ಮೆ ಪೂರೈಕೆಯಾಗುವ ನೀರು ಸಂಪೂರ್ಣ ಕಲುಷಿತಗೊಂಡು ಬರುತ್ತಿದ್ದು, ಸಾರ್ವಜನಿಕರ ಆರೋಗ್ಯದ ಜೊತೆ ಪಾಲಿಕೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಈಗಾಗಲೇ 6 ರಿಂದ 7 ದಿನಗಳಿಗೊಮ್ಮೆ ತಡವಾಗಿ ನೀರು ಬಿಡಲಾಗುತ್ತಿದೆ. ಅದರಂತೆ ಭಾನುವಾರ ನೀರು ಪೂರೈಸಲಾಗಿದೆಯಾದರೂ, ಅದು ಕುಡಿಯಲು ಬಿಡಿ,…

Read More

ಧಾರವಾಡ-ಹಾವೇರಿ ಪೊಲೀಸರ ಜಂಟಿ ಭರ್ಜರಿ ಕಾರ್ಯಾಚರಣೆ: ಸಿನಿಮೀಯ ಶೈಲಿಯಲ್ಲಿ ಅಂತರರಾಜ್ಯ ಕಳ್ಳರ ಗ್ಯಾಂಗ್ ಪತ್ತೆ, 1.15 ಕೋಟಿ ಮೌಲ್ಯದ ಆಭರಣ ಜಫ್ತು

ಹುಬ್ಬಳ್ಳಿ: ಧಾರವಾಡ ಮತ್ತು ಹಾವೇರಿ ಜಿಲ್ಲಾ ಪೊಲೀಸರು ಜಂಟಿಯಾಗಿ ನಡೆಸಿದ ಸಿನಿಮೀಯ ಮಾದರಿಯ ಮಹತ್ವದ ಕಾರ್ಯಾಚರಣೆಯಲ್ಲಿ ಅಂತರರಾಜ್ಯ ಕಳ್ಳರ ಗ್ಯಾಂಗ್ ಒಂದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 1 ಕೋಟಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಕ್ಷೇಶ್ವರ ತಾಲ್ಲೂಕಿನ ಬಾಳೇಹೊಸೂರಿನ ಶಿವರಾಜ ಹನುಮಂತಪ್ಪ ಮೋಡಿಕೇರ ಹಾಗೂ ಸಿಂಧನೂರು ತಾಲ್ಲೂಕಿನ ಅಂಬಾಪುರದ ಅಶೋಕ ಅಲಿಯಾಸ್ ರಮೇಶ್ ಶಿವಪ್ಪ ಕೊಂಜೆಕುರವರ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಜಾಲದಲ್ಲಿದ್ದ ಇನ್ನುಳಿದ ನಾಲ್ವರು ಆರೋಪಿಗಳು…

Read More

​ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ಕಪ್ಪು ಚುಕ್ಕೆ: ನಿವೃತ್ತ ಡಿಡಿಪಿಐ ಎಸ್.ಎಸ್. ಕೆಳದಿಮಠ ವಿರುದ್ಧ ವಕೀಲರಾದ ಡಾ. ಸುವರ್ಣಲತಾ ಜಿ ಗದಿಗೆಪ್ಪಗೌಡರ ಗಂಭೀರ ಆರೋಪ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೊನ್ನೆ ನಿವೃತ್ತರಾದ ಡಿಡಿಪಿಐ ಎಸ್.ಎಸ್. ಕೆಳದಿಮಠ ವಿರುದ್ಧ ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಅನಧಿಕೃತ ಶಾಲೆಗಳ ನಿರ್ವಹಣೆ ಹಾಗೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಿದ ಆರೋಪಗಳನ್ನು ಮಾಡುತ್ತಾ ವಿದ್ಯಾನಿಕೇತನ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಹಾಗೂ ಅಡ್ವಕೇಟ್ ಮತ್ತು ಶಿಕ್ಷಣ ಸೇವೆ ಗುರುತಿಸಿ ನೀಡಿದ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಷ್ಠಿತ “ವೀರ ರಾಣಿ ಕಿತ್ತೂರ ಚೆನ್ನಮ್ಮ” ರಾಜ್ಯ ಪ್ರಶಸ್ತಿಪುರಸ್ಕೃತರಾ ಡಾ. ಸುವರ್ಣಲತಾ ಜಿ….

Read More

​ಮೇ 1ರಂದು ಹುಬ್ಬಳ್ಳಿಯಲ್ಲಿ ಮಹಿಳಾ ಜನಾಕ್ರೋಶ ಸಭೆ: ಕಾಂಗ್ರೆಸ್ ಕುತಂತ್ರದ ವಿರುದ್ಧ ಬಿಜೆಪಿ ರಣಕಹಳೆ

ಹುಬ್ಬಳ್ಳಿ: ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ನಾರಿ ಶಕ್ತಿ ವಂದನಾ’ ಕಾಯ್ದೆಯ ವಿರುದ್ಧ ಕಾಂಗ್ರೆಸ್ ಪಕ್ಷ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ಪ್ರತಿಭಟಿಸಲು ಮೇ 1ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ‘ಮಹಿಳಾ ಜನಾಕ್ರೋಶ ಸಭೆ’ಯನ್ನು ಹಮ್ಮಿಕೊಂಡಿದೆ. ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ​ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಮಹಿಳಾ ಮೀಸಲಾತಿ…

Read More

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಮಹಾದುರಂತ: 4 ಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿದ ಪ್ರಯಾಣಿಕರು!

​ಬೆಂಗಳೂರು/ಹುಬ್ಬಳ್ಳಿ: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲಾಗದೆ ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ನಡೆದಿದೆ. ಇದರಿಂದ ನೂರಾರು ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾಗಿದ್ದು, ಅಂತಿಮವಾಗಿ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ​ಘಟನೆಯ ವಿವರ: ​ಹೈದರಾಬಾದ್‌ನಿಂದ ಹೊರಟಿದ್ದ Fly91 ಏರ್ ಲೈನ್ಸ್ ಸಂಸ್ಥೆಯ IC3401 (ATR Turboprop) ವಿಮಾನವು ನಿಗದಿತ ಸಮಯದಂತೆ ಸಂಜೆ 4:30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ…

Read More

​ಹುಬ್ಬಳ್ಳಿ: ನಾಳೆ ಶ್ರೀ ಜ್ಯೋತಿಭಾ ದೇವರ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ

ಹುಬ್ಬಳ್ಳಿ: ಇಲ್ಲಿನ ಬಂಕಾಪುರ ಚೌಕದ ಸಮೀಪವಿರುವ ಕುಲಕರ್ಣಿ ಓಣಿಯ (ಯಲ್ಲಾಪುರ ಓಣಿ) ಶ್ರೀ ಕೇದಾರಲಿಂಗ (ಜ್ಯೋತಿಭಾ) ದೇವಾಲಯದಲ್ಲಿ ಅಕ್ಷಯ ತೃತೀಯಾ ಹಾಗೂ ಶ್ರೀ ಜ್ಯೋತಿಭಾ ದೇವರ ಮೂರ್ತಿ ಪ್ರತಿಷ್ಠಾಪನೆಯ ವಾರ್ಷಿಕೋತ್ಸವದ ನಿಮಿತ್ತ ಏಪ್ರಿಲ್ 20ರ ಸೋಮವಾರದಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಲಿದೆ. ​ಅಂದು ಬೆಳಿಗ್ಗೆ 8:00 ಗಂಟೆಗೆ ಕಲಶ ಸ್ಥಾಪನೆಯೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ತದನಂತರ ಗಣಹೋಮ, ರುದ್ರ ಹವನ ಹಾಗೂ ಪೂರ್ಣಾಹುತಿ ನೆರವೇರಲಿವೆ. ಬೆಳಿಗ್ಗೆ 11:30 ಗಂಟೆಯಿಂದ ಶ್ರೀ ಜ್ಯೋತಿಭಾ ದೇವರಿಗೆ…

Read More

ಹುಬ್ಬಳ್ಳಿ: ಯುವತಿಗೆ ಪೀಡೆ; ಕಿಡಿಗೇಡಿಗೆ ಸಾರ್ವಜನಿಕವಾಗಿ ಚಪ್ಪಲಿ ಸೇವೆ

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಪುಂಡನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ನಡೆದಿದೆ. ​ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಯನ್ನು ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದ ಯುವತಿಯ ಪೋಷಕರು ಹಾಗೂ ಸ್ಥಳೀಯ ಮಹಿಳೆ ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಆರೋಪಿಯನ್ನು ವಿದ್ಯಾನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ…

Read More

ನಿರೀಕ್ಷಿತ ಅಂಕ ಬರಲಿಲ್ಲವೆಂದು ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾನು ನಿರೀಕ್ಷಿಸಿದಷ್ಟು ಅಂಕಗಳು ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ​ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಮಾರುತಿ ಕಾಳೆ (18) ಮೃತಪಟ್ಟ ದುರ್ದೈವಿ. ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವಣಿ, ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 71 ರಷ್ಟು ಅಂಕಗಳನ್ನು ಪಡೆದಿದ್ದಳು. ಆದರೆ, ಪರೀಕ್ಷೆಯಲ್ಲಿ ನೂರಕ್ಕೆ ನೂರು ಪ್ರತಿಶತ ಅಂಕಗಳನ್ನು ಪಡೆಯಲೇಬೇಕೆಂದು…

Read More

ಉತ್ತರ ಕರ್ನಾಟಕದ ಕಲಾವಿದರಿಗೆ ಸನ್ಮಾನ: ರಂಗಭೂಮಿ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ – ಹಿರಿಯೂರು ರಾಘವೇಂದ್ರ

​ಹುಬ್ಬಳ್ಳಿ: ಉತ್ತರ ಕರ್ನಾಟಕವು ರಂಗಭೂಮಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನೂರಾರು ಕಲಾವಿದರ ಬದುಕಿಗೆ ಆಸರೆಯಾಗಿ ನಿಂತಿದೆ ಎಂದು ಖ್ಯಾತ ಚಿತ್ರ ನಿರ್ದೇಶಕ ಹಾಗೂ ಸಾಹಿತಿ ಹಿರಿಯೂರು ರಾಘವೇಂದ್ರ ಅಭಿಪ್ರಾಯಪಟ್ಟರು. ​ನಗರದ ಭವಾನಿ ನಗರದಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಿರಿಯ ರಂಗಕರ್ಮಿ, ಸಿನಿಮಾ ಹಾಗೂ ಧಾರವಾಹಿ ನಟಿ ಮಾಲತೇಶ್ರೀ ಮೈಸೂರು ಅವರಿಗೆ ಏರ್ಪಡಿಸಲಾಗಿದ್ದ ಗೌರವ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಿನಿಮಾ ಮತ್ತು ಧಾರವಾಹಿಗಳ ಮೂಲಕ ಮನೆಮಾತಾಗಿರುವ ಮಾಲತೇಶ್ರೀ…

Read More