ಡಾವಣಗೇರಿ:ಅಪ್ಪ ನದಿಯ ಪಾಲು, ಅಮ್ಮ ಜೈಲು ಪಾಲು: ಅಕ್ರಮ ಸಂಬಂಧದ ಅಮಲಿಗೆ ಬಲಿಯಾದ ಮುಗ್ಧ ಸಂಸಾರ!

ಡಾವಣಗೇರಿ: ಶಾಲೆಯ ಯೂನಿಫಾರ್ಮ್ ಕಳಚದೆ, ಅಜ್ಜಿಯ ಎದೆಗಪ್ಪಿಕೊಂಡು ಏನೂ ಅರಿಯದಂತೆ ನೋಡುತ್ತಿರುವ ಇಬ್ಬರು ಪುಟ್ಟ ಕಂದಮ್ಮಗಳು… “ನನ್ನ ಮಗನನ್ನು ತಂದುಕೊಡಿ” ಎಂದು ಎದೆ ಬಡಿದುಕೊಳ್ಳುತ್ತಿರುವ ಹೆತ್ತವ್ವಳ ರೋಧನ… ಇಡೀ ಊರನ್ನೇ ಆವರಿಸಿರುವ ಸ್ಮಶಾನ ಮೌನ. ದಾವಣಗೆರೆಯ ಪಾಮೇನಹಳ್ಳಿಯಲ್ಲಿ ನಡೆದಿರುವ ಈ ದುರಂತ, ಎಂಥವರ ಕರುಳನ್ನೂ ಹಿಂಡಿ ಹಿಪ್ಪೆ ಮಾಡುತ್ತದೆ. 12 ವರ್ಷಗಳ ಪ್ರೀತಿಗೆ ಪ್ರಿಯಕರನೇ ಮುಖ್ಯವಾದನೇ? ಹನ್ನೆರಡು ವರ್ಷಗಳ ಹಿಂದೆ ಪ್ರೀತಿಸಿ ಕೈಹಿಡಿದವಳು ಶೃತಿ. ಕೂಲಿ ನಾಲಿ ಮಾಡಿ ಬೆವರು ಸುರಿಸುತ್ತಿದ್ದ ರಘು (36), ಆಕೆಯನ್ನು ಕಣ್ಣಲ್ಲಿ…

Read More

ಅತ್ಯಾಚಾರ, ಅಕ್ರಮ ಗರ್ಭಪಾತ: ಆರ್‌ಎಂಪಿ ವೈದ್ಯ, ನರ್ಸ್ ಸೇರಿ 7 ಮಂದಿ ಬಂಧನ

ಗದಗ: 26 ವರ್ಷದ ಯುವತಿಯ ಮೇಲೆ ವಿವಿಧ ದಿನಗಳಲ್ಲಿ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾದ ಬಳಿಕ ಕಾನೂನುಬಾಹಿರವಾಗಿ ಗರ್ಭಪಾತ ಮಾಡಿಸಿದ ಆರೋಪದಡಿ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಏಳು ಮಂದಿಯನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬೀರಅಹ್ಮದ್ ಅಲಿಯಾಸ್ ಜೂನಸಾಬ್, ಮಹ್ಮದ್ ರಫೀಕ್ ಲಂಗೋಟಿ, ಪ್ರದೀಪ್ ಸಾಗರ ನವಲೇಕರ, ಭರತ್ ಮಹಾದೇವಪ್ಪ ಕೊರವರ, ಸಂದೀಪ್ ಸಾಗರ ನವಲೇಕರ ಹಾಗೂ ಬೆಳ್ಳಟ್ಟಿ ಗ್ರಾಮದ ಆರ್‌ಎಂಪಿ ವೈದ್ಯ ನಾಗರಾಜ್ ಚಿದಾನಂದ ಕಮತರ…

Read More

ಹೊಸ ಬಟ್ಟೆ ಕೊಡಿಸಲಿಲ್ಲವೆಂದು ಅಕ್ಕ-ತಂಗಿಯರ ಆತ್ಮಹತ್ಯೆ; ಕಲಬುರಗಿಯಲ್ಲಿ ಹೃದಯವಿದ್ರಾವಕ ಘಟನೆ

ಕಲಬುರಗಿ: ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲವೆಂದು ಮನನೊಂದು ಅಕ್ಕ-ತಂಗಿಯರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ನಡೆದಿದೆ. ತಾಯಿಯನ್ನು ಕಳೆದುಕೊಂಡು ತಂದೆಯೊಂದಿಗೆ ವಾಸಿಸುತ್ತಿದ್ದ ಪೂಜಾ ಹಾಗೂ ಆಕೆಯ ತಂಗಿ ಈ ದುರಂತ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಯುವತಿಯರು ಸುಮಾರು ಒಂಬತ್ತು ವರ್ಷಗಳ ಹಿಂದೆಯೇ ತಾಯಿಯನ್ನು ಕಳೆದುಕೊಂಡಿದ್ದು, ತಂದೆಯ ಆರೈಕೆಯಲ್ಲೇ ಬದುಕು ಸಾಗಿಸುತ್ತಿದ್ದರು. ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ನಂತರ ಕುಡಿತದ ಚಟಕ್ಕೆ ಬಿದ್ದಿದ್ದರು ಎನ್ನಲಾಗಿದೆ. ಮದ್ಯದ ನಶೆಯಲ್ಲಿ…

Read More

ನಗರೋತ್ಥಾನ ಯೋಜನೆ ಬಾಕಿ ಪಾವತಿ ಪ್ರಕರಣ: ಗದಗ ಜಿಲ್ಲಾಡಳಿತ ಭವನದ ಪೀಠೋಪಕರಣಗಳ ಜಪ್ತಿ

ಗದಗ: ನಗರೋತ್ಥಾನ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಪಾವತಿಸಬೇಕಿದ್ದ ಸುಮಾರು ₹7.18 ಕೋಟಿ ಮೊತ್ತವು ಬಡ್ಡಿ ಸೇರಿ ಸುಮಾರು ₹7.60 ಕೋಟಿಗೆ ಏರಿಕೆಯಾದ ಹಿನ್ನೆಲೆಯಲ್ಲಿ, ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಗದಗ ಜಿಲ್ಲಾಡಳಿತ ಭವನದಲ್ಲಿರುವ ವಿವಿಧ ಪೀಠೋಪಕರಣಗಳು ಹಾಗೂ ಉಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದೆ. ನ್ಯಾಯಾಲಯದ ಆದೇಶದ ಅನ್ವಯ ಗುರುವಾರ ಜಿಲ್ಲಾಡಳಿತ ಭವನದಲ್ಲಿ ಜಪ್ತಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಕಂಪ್ಯೂಟರ್ ಸೇರಿದಂತೆ ವಿವಿಧ ಕಚೇರಿ ಉಪಕರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ನಗರೋತ್ಥಾನ ಯೋಜನೆ ಕಾಮಗಾರಿಗೆ ಸಂಬಂಧಿಸಿದ ಬಾಕಿ ಹಣ…

Read More

ಹನೂರಿನಲ್ಲಿ ಕೆಎಸ್‌ಆರ್‌ಟಿಸಿ ನೂತನ ಬಸ್ ಘಟಕ ನಿರ್ಮಾಣಕ್ಕೆ ಸಚಿವ ಸಿ. ಪುಟ್ಟರಂಗಶೆಟ್ಟಿ ಶಂಕುಸ್ಥಾಪನೆ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ಘಟಕ ನಿರ್ಮಾಣ ಕಾರ್ಯಕ್ಕೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹನೂರು ಭಾಗದಲ್ಲಿ ಸುಸಜ್ಜಿತ ಬಸ್ ಘಟಕ ನಿರ್ಮಾಣವಾದ ನಂತರ ಗ್ರಾಮೀಣ ಹಾಗೂ ಕಾಡಂಚಿನ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸಲು ಸಾರಿಗೆ ನಿಗಮಕ್ಕೆ ಅನುಕೂಲವಾಗಲಿದೆ. ಇದರಿಂದ ಸ್ಥಳೀಯ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗಲಿದೆ ಎಂದರು. ನೂತನ ಘಟಕದಲ್ಲಿ ವಾಹನ…

Read More

ಕುಡಿಯುವ ನೀರು, ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಬರ ಪರಿಸ್ಥಿತಿ ಹಾಗೂ ಅತಿವೃಷ್ಟಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಹಾಗೂ ಪ್ರಕೃತಿ ವಿಕೋಪ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು…

Read More

ಹನೂರು:ಕರ್ನಾಟಕ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ: ಸಮಾಜಮುಖಿ ಕಾರ್ಯಕ್ಕೆ ಶ್ರೀಗಳ ಮೆಚ್ಚುಗೆ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಶ್ರೀ ಮಲೆಮಹದೇಶ್ವರಸ್ವಾಮಿ ಕೃಪಾ ವಿದ್ಯಾಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಡಿ ಅಗತ್ಯ ಪರಿಕರಗಳನ್ನು ವಿತರಿಸಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಆಧಾರವಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಹಾಗೂ ವಸತಿ ಸೌಲಭ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ನೀಡಿರುವ ಸಹಕಾರ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಕೆ….

Read More

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ: ಅಧಿಕಾರಿ ಮುನಿರಾಜು

ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿ ಮುನಿರಾಜು ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್ 30ರಿಂದ ಆಗಸ್ಟ್ 8ರವರೆಗೆ ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ಗೃಹಗೃಹ ಸಮೀಕ್ಷೆ ಕಾರ್ಯವೂ ನಡೆಯಲಿದೆ….

Read More

ಶಿಗ್ಗಾಂವ: ತಂದೆ-ತಾಯಿ, ಗುರುಗಳನ್ನು ಗೌರವಿಸಿದಾಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ: ಬಿಇಒ ಎಂ.ಬಿ. ಅಂಬಿಗೇರ

ಶಿಗ್ಗಾಂವ: ಜಗತ್ತಿನಲ್ಲಿ ಶ್ರೇಷ್ಠ ಜೀವಗಳು ಎಂದರೆ ತಂದೆ, ತಾಯಿ ಹಾಗೂ ಗುರುಗಳು. ಇವರು ನಿಸ್ವಾರ್ಥಿಗಳಾಗಿದ್ದು, ಅವರನ್ನು ಗೌರವಿಸುವುದರ ಜೊತೆಗೆ ಅವರ ಒಳ್ಳೆಯ ಮಾತುಗಳನ್ನು ಆಲಿಸಿ ಜೀವನದಲ್ಲಿ ಪಾಲಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು. ಅವರು ಬುಧವಾರ ಪಟ್ಟಣದ ಆಶ್ರಯ ಪ್ಲಾಟ್ ಸಮೀಪದ ಸರ್ಕಾರಿ ಕನ್ನಡ ಪ್ರೌಢಶಾಲೆಯಲ್ಲಿ ಮಾತ್ರೋಶ್ರೀ ಅನಸೂಯಾ ಫಕ್ಕೀರಪ್ಪ ಯಲಿಗಾರ ಸೇವಾ ಸಂಸ್ಥೆಯ ವತಿಯಿಂದ ದಿ. ಫಕ್ಕೀರಪ್ಪ ಯಲಿಗಾರ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ…

Read More

ನೆಲಮಂಗಲ:ಕರ್ತವ್ಯದ ವೇಳೆಯೇ ಸಿದ್ದರಬೆಟ್ಟದಲ್ಲಿ ಪಾರ್ಟಿ: 6 ಪಿಡಿಒಗಳು ಅಮಾನತು

ನೆಲಮಂಗಲ: ಕರ್ತವ್ಯದ ವೇಳೆಯೇ ಧಾರ್ಮಿಕ ಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಗುಂಡು-ತುಂಡಿನ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಈ ಪ್ರಕರಣದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ 10(ಡಿ) ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ. ನಡತೆ, ಶಿಸ್ತು,…

Read More