ಭಾರಿ ಮಳೆ: ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ, ಕೃಷಿ ಬೆಳೆಗಳಿಗೆ ಹಾನಿ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ರೈತರ ಕೃಷಿ ಬೆಳೆಗಳು ನಾಶವಾಗಿವೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಜೇವರ್ಗಿಯಲ್ಲಿ ರೈತರಿಗೆ ಭಾರಿ ನಷ್ಟಜೇವರ್ಗಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಬಿರಾಳ (ಕೆ) ಗ್ರಾಮದಲ್ಲಿ ಹಳ್ಳದ ನೀರು ತೋಟಗಳಿಗೆ ನುಗ್ಗಿದ ಪರಿಣಾಮ ಕಟಾವಿಗೆ ಬಂದಿದ್ದ 5,800 ಪಪ್ಪಾಯ ಗಿಡಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಇದರಿಂದ…

