ಬಿರಡಿಯಲ್ಲಿ ಶ್ರೀ ಮುರಸಿದ್ದೇಶ್ವರ ಜಾತ್ರಾ ಮಹೋತ್ಸವ: ಕಬಡ್ಡಿ, ವಾಲಿಬಾಲ್, ಡೊಳ್ಳಿನ ಪದ ಹಾಗೂ ಎತ್ತಿನಗಾಡಿ ಸ್ವರ್ದೆಗೆ ಸಿದ್ಧತೆ

ರಾಯಬಾಗ (ಭಿರಡಿ): ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ಶ್ರೀ ಮುರಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 19 ರಿಂದ 23 ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಂಗೋಲಿ, ರಾಜ್ಯ ಮಟ್ಟದ ಕಬಡ್ಡಿ, ವಾಲಿಬಾಲ್ ಪಂದ್ಯಾವಳಿಗಳು, ಜಿದ್ದಾಜಿದ್ದಿನ ಡೊಳ್ಳಿನ ಪದಗಳು ಹಾಗೂ ಸಾಂಪ್ರದಾಯಿಕ ಜೋಡು ಎತ್ತಿನಗಾಡಿ ಮತ್ತು ಕುದುರೆಗಾಡಿ ಶರ್ಯತ್ತುಗಳು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿವೆ. ಕ್ರೀಡಾ ಸ್ಪರ್ಧೆಗಳ ವಿವರ: ಜಾನಪದ ಮತ್ತು ಸಾಂಪ್ರದಾಯಿಕ ಕಾರ್ಯಕ್ರಮಗಳು: ಇತರ ಕಾರ್ಯಕ್ರಮಗಳು:ಅಕ್ಟೋಬರ್ 23 ರಂದು ಮಧ್ಯಾಹ್ನ…

Read More

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಕದನ: ಕತ್ತಿ-ಪಾಟೀಲ ನಡುವಿನ ಹಣಾಹಣಿಗೆ ಬ್ರೇಕ್!

ಹುಕ್ಕೇರಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಹುಕ್ಕೇರಿ ತಾಲ್ಲೂಕಿನ ವಿವಿದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತಕ್ಷೇತ್ರದ ಚುನಾವಣೆ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದೆ. ಈ ಮೂಲಕ, ಈ ಕ್ಷೇತ್ರದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಮತ್ತು ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ ಅವರ ನಡುವೆ ನಡೆಯಬೇಕಿದ್ದ ನೇರ ಹಣಾಹಣಿಗೆ ಹಿನ್ನಡೆಯಾದಂತಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ: ಚುನಾವಣೆ ಮುಂದೂಡಿಕೆಬೆಳಗಾವಿ ಡಿಸಿಸಿ ಬ್ಯಾಂಕಿಗೆ ದಿನಾಂಕ ಅಕ್ಟೋಬರ್ 19, 2025…

Read More

ರಾಯಬಾಗದಲ್ಲಿ ನವೆಂಬರ್ 2 ರಂದು ‘ಚುಟುಕು ಕಮ್ಮಟ’: ಸೀಮಿತ ಸಂಖ್ಯೆಯ ಪ್ರಶಿಕ್ಷಣಾರ್ಥಿಗಳಿಗೆ ಅವಕಾಶ

ರಾಯಬಾಗ (ಬೆಳಗಾವಿ ಜಿಲ್ಲೆ): ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬೆಳಗಾವಿ ಇವರ ಸಹಯೋಗದಲ್ಲಿ, ಚುಟುಕು ಸಾಹಿತ್ಯ ಪರಿಷತ್ ತಾಲೂಕಾ ಘಟಕ, ರಾಯಬಾಗದಿಂದ ನವೆಂಬರ್ 02 ರಂದು ಒಂದು ದಿನದ ಚುಟುಕು ಕಮ್ಮಟವನ್ನು (ಕಾರ್ಯಾಗಾರ) ಏರ್ಪಡಿಸಲಾಗಿದೆ. ಈ ಕಮ್ಮಟವು ರಾಯಬಾಗ ತಾಲೂಕಿನ ಆಸಕ್ತ ನಾಗರಿಕರಿಗಾಗಿ ಮಾತ್ರ ಆಯೋಜಿಸಲಾಗಿದ್ದು, ಶಿಬಿರದಲ್ಲಿ ಪಾಲ್ಗೊಳ್ಳಲು ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ ಹಾಗೂ ಲಿಂಗಭೇದವಿಲ್ಲದೆ ತಾಲೂಕಿನ ಯಾರಾದರೂ ಭಾಗವಹಿಸಬಹುದು ಎಂದು ಘಟಕದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಚುಟುಕು ಸಾಹಿತ್ಯ…

Read More

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಬ್ರದರ್ಸ್‌ಗೆ ಭಾರೀ ಮುನ್ನಡೆ; ಒಟ್ಟು 16 ಸ್ಥಾನಗಳಲ್ಲಿ 6 ಅವಿರೋಧ ಆಯ್ಕೆ

ಬೆಳಗಾವಿ: ಉತ್ತರ ಕರ್ನಾಟಕದ ಸಹಕಾರಿ ರಂಗದ ಪ್ರಮುಖ ಸಂಸ್ಥೆಯಾದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (DCC) ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ ರಾಜಕೀಯ ಒಗ್ಗಟ್ಟು ಭಾರೀ ಮುನ್ನಡೆ ತಂದುಕೊಟ್ಟಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಜಾರಕಿಹೊಳಿ ಬಣದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಮಾಜಿ ಅಧ್ಯಕ್ಷ ರಮೇಶ್ ಕತ್ತಿ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ. 16 ಸ್ಥಾನಗಳಿಗೆ ಚುನಾವಣೆ; 6 ಅವಿರೋಧಬೆಳಗಾವಿ ಡಿಸಿಸಿ ಬ್ಯಾಂಕ್‌ನ ಒಟ್ಟು 16 ನಿರ್ದೇಶಕ ಹುದ್ದೆಗಳಿಗೆ ಚುನಾವಣೆ…

Read More

ಮಗಳು ಲವ್ವರ್ ಜತೆ ಪರಾರಿ:ಮಗಳ ಸಂಬಂದ ವೇ ಬೆಡವೆಂದು ಇಡೀ ಊರಿಗೆ ‘ತಿಥಿ ಊಟ’ ಹಾಕಿಸಿದ ತಂದೆ.

ಬೆಳಗಾವಿ: ತಮ್ಮ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ಬಿಟ್ಟು ಪರಾರಿಯಾದ ಕಾರಣ ಮನನೊಂದ ತಂದೆಯೊಬ್ಬರು, ಆಕೆ ತಮ್ಮ ಪಾಲಿಗೆ ಸತ್ತುಹೋದಳೆಂದು ಭಾವಿಸಿ, ಆಕೆಯ ತಿಥಿ ಮಾಡಿ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವಿಲಕ್ಷಣ ವಿದ್ಯಮಾನ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಪ್ರೀತಿ ವಿವಾಹಕ್ಕೆ ಪೋಷಕರ ವಿರೋಧ:ನಾಗರಾಳ ಗ್ರಾಮದ ನಿವಾಸಿ ಶಿವಗೌಡ ಎಂಬವರ ಮಗಳು ಅದೇ ಗ್ರಾಮದ ವಿಠ್ಠಲ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಪ್ರೀತಿ ಮತ್ತು ವಿವಾಹಕ್ಕೆ ಪೋಷಕರು…

Read More

ಬೆಡ್ ಬಾಕ್ಸ್‌ನಲ್ಲಿ ಪತ್ನಿಯ ಶವ ಇಟ್ಟು ಪರಾರಿ: ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಭಯಾನಕ ಕೃತ್ಯ!

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಒಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕಮಲದಿನ್ನಿ ಗ್ರಾಮದಲ್ಲಿ ಪತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ಶವವನ್ನು ಮನೆಯ ಮಂಚದ (ಬೆಡ್) ಒಳಗಿನ ಬಾಕ್ಸ್‌ನಲ್ಲಿ ಇರಿಸಿ, ಬೆಡ್‌ ಅನ್ನು ಮುಚ್ಚಿಟ್ಟು ಮೂರು ದಿನಗಳ ಹಿಂದೆಯೇ ಪರಾರಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಸಾಕ್ಷಿ ಕಂಬಾರ (20) ಎಂದು ಗುರುತಿಸಲಾಗಿದೆ. ಪರಾರಿಯಾದ ಪತಿಯ ಹೆಸರು ಆಕಾಶ್ ಎಂದು ತಿಳಿದುಬಂದಿದೆ. ಪತಿ-ಪತ್ನಿಯರ ನಡುವಿನ ಕೌಟುಂಬಿಕ ಕಲಹ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಈ ಕೊಲೆ…

Read More

ಪ್ರತಿಷ್ಠಿತ ಡಿಸಿಸಿ ಬ್ಯಾಂಕ್‌ ಚುನಾವಣೆ: ಬೆಳಗಾವಿ ಸಹಕಾರಿ ಸಮರ ತಾರಕಕ್ಕೆ!

16 ನಿರ್ದೇಶಕ ಸ್ಥಾನಗಳಿಗೆ ಅ. 19 ರಂದು ಮತದಾನ; ಕತ್ತಿ, ಜಾರಕಿಹೊಳಿ ಬಣಗಳ ನಡುವೆ ಜಿದ್ದಾಜಿದ್ದಿ ಬೆಳಗಾವಿ: ಜಿಲ್ಲೆಯ ಸಹಕಾರ ರಂಗದ ಪ್ರತಿಷ್ಠಿತ ಸಂಸ್ಥೆಯಾದ ಬೆಳಗಾವಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಚುನಾವಣೆ ಕಣವು ರಣ ರಾಜಕೀಯದಂತೆಯೇ ತಾರಕಕ್ಕೇರಿದೆ. ಅಂದಾಜು ₹ 8,000 ಕೋಟಿ ವಹಿವಾಟು ಹೊಂದಿರುವ ಈ ಬ್ಯಾಂಕಿನ 16 ನಿರ್ದೇಶಕ ಸ್ಥಾನಗಳಿಗಾಗಿ ನಡೆಯಲಿರುವ ಚುನಾವಣೆಯು ಸಾಮಾನ್ಯ ಚುನಾವಣೆಗಿಂತಲೂ ಹೆಚ್ಚಿನ ಕುತೂಹಲ ಮೂಡಿಸಿದ್ದು, ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರು ತಮ್ಮ ತಮ್ಮ ಹಿಡಿತ ಸಾಧಿಸಲು…

Read More

ಆರೋಗ್ಯ ಕ್ರಾಂತಿ ಗುರಿ: ಪ್ರತಿ ಜಿಲ್ಲೆಗೆ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ – ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೂ ಕಡ್ಡಾಯವಾಗಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ತಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ​ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ ಮತ್ತು ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಸಿಗಬೇಕು….

Read More

ದಸರಾ ರಜೆಯ ಮಜಾ ದುರಂತದಲ್ಲಿ ಅಂತ್ಯ: ಸಿಂಧುದುರ್ಗ ಸಮುದ್ರದಲ್ಲಿ ಮುಳುಗಿ ಬೆಳಗಾವಿಯ ಮೂವರ ಸಾವು

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬಕ್ಕೆ ಆಘಾತ; ನಾಲ್ವರು ನಾಪತ್ತೆ, ಓರ್ವ ಮಹಿಳೆ ಸ್ಥಿತಿ ಗಂಭೀರ ​ಬೆಳಗಾವಿ: ದಸರಾ ರಜೆಗಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತದಿಂದ ಲೋಂಡಾ ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಯಾಗಿದೆ. ​ಮೂವರು ಬಾಲಕರು ಸಾವು, ಓರ್ವ ಮಹಿಳೆ ಗಂಭೀರ ​ದುರಂತದಲ್ಲಿ ಮೃತರಾದವರನ್ನು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ…

Read More

ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪಾಪಿ ಭರತೇಶ ಮಿರ್ಜಿಗೆ ಗಲ್ಲು ಶಿಕ್ಷೆ, ₹10 ಲಕ್ಷ ದಂಡ

ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದ್ದು, ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಿದೆ. ರಾಯಬಾಗ ತಾಲೂಕಿನ ಗ್ರಾಮವೊಂದರಲ್ಲಿ 2019ರ ಸೆಪ್ಟೆಂಬರ್ 10ರಂದು ನಡೆದಿದ್ದ ಈ ಭೀಕರ ಕೃತ್ಯಕ್ಕೆ ಸಂಬಂಧಿಸಿ, ಅಪರಾಧಿ ಭರತೇಶ ರಾವಸಾಹೇಬ ಮಿರ್ಜಿ ಎಂಬಾತನಿಗೆ ಜಿಲ್ಲಾ ಘನ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು ಗಲ್ಲು ಶಿಕ್ಷೆ ವಿಧಿಸಿ ತೀರ್ಪು…

Read More