ರಾಮದುರ್ಗದಲ್ಲಿ ಭೀಕರ ಅಪಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ ಅರ್ಚಕ ಸೇರಿ ಇಬ್ಬರು ಸಾವು
ರಾಮದುರ್ಗ: ಟಾಟಾ ಏಸ್ ವಾಹನ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅರ್ಚಕರೊಬ್ಬರು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಮದುರ್ಗ ಪಟ್ಟಣದ ಶಿವನಮೂರ್ತಿ ದೇವಸ್ಥಾನದ ಬಳಿ ಭಾನುವಾರ ನಡೆದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರ್ಚಕರಾದ ವಿಜಯಕುಮಾರ ಗಣಪತಿ ಗೋಡಬೋಲೆ (54) ಮತ್ತು ಟಾಟಾ ಏಸ್ ವಾಹನದ ಚಾಲಕ, ಗುಲ್ಬರ್ಗಾದ ನಿವಾಸಿ ಅನೀಲ ರಮೇಶ ಬಿರಾದಾರ (21) ಎಂದು ಗುರುತಿಸಲಾಗಿದೆ. ಘಟನೆ ವಿವರ:ಘಟನೆ ನಡೆದ ಸಂದರ್ಭದಲ್ಲಿ, ಸವದತ್ತಿಯಿಂದ…

