ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ಗೆ 9 ಗಂಟೆಗೂ ಹೆಚ್ಚು ಕಾಲ ವಿಚಾರಣೆ
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ಅವಹೇಳನಕಾರಿ ವಿಡಿಯೊಗಳನ್ನು ತಯಾರಿಸಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ. ಅವರನ್ನು ಸೋಮವಾರ (ಆಗಸ್ಟ್ 25) ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಸತತ ಎರಡನೇ ದಿನವೂ ತೀವ್ರ ವಿಚಾರಣೆ ನಡೆಸಿದರು. ಸಮೀರ್ ಅವರು ತಮ್ಮ ವಕೀಲರೊಂದಿಗೆ ಬೆಳಿಗ್ಗೆ 12:20ಕ್ಕೆ ಬೆಳ್ತಂಗಡಿ ಪೊಲೀಸ್ ಠಾಣಾ ಕಚೇರಿಗೆ ಹಾಜರಾಗಿದ್ದರು. ಮೊದಲಿಗೆ ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ, ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಅವರು ಸಮೀರ್ರನ್ನು ವಿಚಾರಣೆಗೊಳಪಡಿಸಿದರು. ನಂತರ,…

