ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ನಿಂದ ಭೀಕರ ಅಪಘಾತ: 100ಕ್ಕೂ ಹೆಚ್ಚು ಕುರಿಗಳ ದುರ್ಮರಣ
ಮುನಿರಾಬಾದ: ನಿಡಗುಂದಿಗೆ ಸಮೀಪದ ಬೇವಿನಹಳ್ಳಿಯ ಕಿರ್ಲೋಸ್ಕರ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ 100ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನ ಕುರಿಗಳ ಹಿಂಡಿಗೆ ನುಗ್ಗಿದ್ದರಿಂದ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ರಸ್ತೆ ತುಂಬೆಲ್ಲಾ ಕುರಿಗಳು ಚೆಲ್ಲಾಪಿಲ್ಲಿಯಾಗಿದ್ದವು.ಪರಿಹಾರ ಭರವಸೆ, ಗ್ರಾಮಸ್ಥರ ಆಕ್ರೋಶ ಈ ಕುರಿಗಳು ಬೇವಿನಹಳ್ಳಿ ಗ್ರಾಮದ ಚಿದಾನಂದಪ್ಪ ಮಲ್ಲಯ್ಯ ಮಡ್ಡಿ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ…

