ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ನಿಂದ ಭೀಕರ ಅಪಘಾತ: 100ಕ್ಕೂ ಹೆಚ್ಚು ಕುರಿಗಳ ದುರ್ಮರಣ

ಮುನಿರಾಬಾದ: ನಿಡಗುಂದಿಗೆ ಸಮೀಪದ ಬೇವಿನಹಳ್ಳಿಯ ಕಿರ್ಲೋಸ್ಕರ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ 100ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನ ಕುರಿಗಳ ಹಿಂಡಿಗೆ ನುಗ್ಗಿದ್ದರಿಂದ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ರಸ್ತೆ ತುಂಬೆಲ್ಲಾ ಕುರಿಗಳು ಚೆಲ್ಲಾಪಿಲ್ಲಿಯಾಗಿದ್ದವು.ಪರಿಹಾರ ಭರವಸೆ, ಗ್ರಾಮಸ್ಥರ ಆಕ್ರೋಶ ಈ ಕುರಿಗಳು ಬೇವಿನಹಳ್ಳಿ ಗ್ರಾಮದ ಚಿದಾನಂದಪ್ಪ ಮಲ್ಲಯ್ಯ ಮಡ್ಡಿ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ನಿಂದ ಭೀಕರ ಅಪಘಾತ: 100ಕ್ಕೂ ಹೆಚ್ಚು ಕುರಿಗಳ ದುರ್ಮರಣ

ಮುನಿರಾಬಾದ: ನಿಡಗುಂದಿಗೆ ಸಮೀಪದ ಬೇವಿನಹಳ್ಳಿಯ ಕಿರ್ಲೋಸ್ಕರ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ 100ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನ ಕುರಿಗಳ ಹಿಂಡಿಗೆ ನುಗ್ಗಿದ್ದರಿಂದ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ರಸ್ತೆ ತುಂಬೆಲ್ಲಾ ಕುರಿಗಳು ಚೆಲ್ಲಾಪಿಲ್ಲಿಯಾಗಿದ್ದವು.ಪರಿಹಾರ ಭರವಸೆ, ಗ್ರಾಮಸ್ಥರ ಆಕ್ರೋಶ ಈ ಕುರಿಗಳು ಬೇವಿನಹಳ್ಳಿ ಗ್ರಾಮದ ಚಿದಾನಂದಪ್ಪ ಮಲ್ಲಯ್ಯ ಮಡ್ಡಿ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ…

Read More

ಪ್ರವಾಹ ಸಂತ್ರಸ್ತರಿಗೆ ಸಿಎಂ ಬಂಪರ್ ಪ್ಯಾಕೇಜ್: NDRF ಜೊತೆಗೆ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ!

ಕಲಬುರ್ಗಿ:ರಾಜ್ಯದ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತು ಜನಸಾಮಾನ್ಯರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಸೆ. 30) ಬೃಹತ್ ಹೆಚ್ಚುವರಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ (NDRF) ಮಾನದಂಡದ ಪರಿಹಾರದ ಜೊತೆಗೆ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ನೆರವು ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಕಲಬುರಗಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಹೆಚ್ಚುವರಿ ನೆರವಿನಿಂದ ರೈತರಿಗೆ ದ್ವಿಗುಣ ಪರಿಹಾರ ಸಿಗಲಿದೆ…

Read More

ಶಾಲಾ ಬಸ್‌ಗೆ ಸಿಮೆಂಟ್‌ ಟ್ಯಾಂಕರ್‌ ಡಿಕ್ಕಿ: ಆರು ವಿದ್ಯಾರ್ಥಿಗಳಿಗೆ ಗಾಯ

ಕಲಬುರಗಿ: ನಗರದ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಘಟನೆ ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆದಿತ್ಯ (12), ಪ್ರೀತಂ ನಿಂಗಣ್ಣ (6), ಸುಪ್ರೀತ್ (9), ಸಾಯಿನಾಥ (13), ದಕ್ಷಿತ್ (7) ಮತ್ತು ವಿಕ್ರಾಂತ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದಿತ್ಯನನ್ನು ಕಾಮರೆಡ್ಡಿ ಆಸ್ಪತ್ರೆಗೆ, ಪ್ರೀತಂನನ್ನು ಬಿಲ್ವಾ ಆಸ್ಪತ್ರೆಗೆ…

Read More

ಭಾರಿ ಮಳೆ: ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ, ಕೃಷಿ ಬೆಳೆಗಳಿಗೆ ಹಾನಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ರೈತರ ಕೃಷಿ ಬೆಳೆಗಳು ನಾಶವಾಗಿವೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಜೇವರ್ಗಿಯಲ್ಲಿ ರೈತರಿಗೆ ಭಾರಿ ನಷ್ಟಜೇವರ್ಗಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಬಿರಾಳ (ಕೆ) ಗ್ರಾಮದಲ್ಲಿ ಹಳ್ಳದ ನೀರು ತೋಟಗಳಿಗೆ ನುಗ್ಗಿದ ಪರಿಣಾಮ ಕಟಾವಿಗೆ ಬಂದಿದ್ದ 5,800 ಪಪ್ಪಾಯ ಗಿಡಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಇದರಿಂದ…

Read More

40 ಲಕ್ಷ ಲಂಚಕ್ಕೆ ಬೇಡಿಕೆ: ಕಲಬುರಗಿ ದಕ್ಷಿಣ ವಲಯದ ಎಸಿಪಿ ಸೇರಿದಂತೆ ಐವರ ಬಂಧನ

ಕಲಬುರಗಿ: ಭಾರಿ ಮೊತ್ತದ ಲಂಚ ಪಡೆಯುತ್ತಿದ್ದಾಗ ನಗರ ದಕ್ಷಿಣ ವಲಯದ ಎಸಿಪಿ ಸೇರಿ ಐವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದವರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ್, ರೈಟರ್ ಚಂದ್ರಕಾಂತ, ಕಾನ್‌ಸ್ಟೆಬಲ್ ರಾಘವೇಂದ್ರ, ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳಾದ ದಸ್ತಗೀರ್ ಮತ್ತು ಶಿವಪ್ಪ ಸೇರಿದ್ದಾರೆ. ಘಟನೆಯ ವಿವರ:ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ರೇವಣಸಿದ್ದಪ್ಪ ಎಂಬುವರಿಂದ ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು,…

Read More