ಶಾಲಾ ಬಸ್ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ: ಆರು ವಿದ್ಯಾರ್ಥಿಗಳಿಗೆ ಗಾಯ
ಕಲಬುರಗಿ: ನಗರದ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಘಟನೆ ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆದಿತ್ಯ (12), ಪ್ರೀತಂ ನಿಂಗಣ್ಣ (6), ಸುಪ್ರೀತ್ (9), ಸಾಯಿನಾಥ (13), ದಕ್ಷಿತ್ (7) ಮತ್ತು ವಿಕ್ರಾಂತ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದಿತ್ಯನನ್ನು ಕಾಮರೆಡ್ಡಿ ಆಸ್ಪತ್ರೆಗೆ, ಪ್ರೀತಂನನ್ನು ಬಿಲ್ವಾ ಆಸ್ಪತ್ರೆಗೆ…

