ಶಾಲೆ ಆವರಣದಲ್ಲಿ ಆಘಾತಕಾರಿ ಘಟನೆ: ವಿರಾಜಪೇಟೆ ಶಾಲೆಯ 25ಕ್ಕೂ ಅಧಿಕ ಮಕ್ಕಳ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು
ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಜೇನು ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪ್ರತಿದಿನದಂತೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಬೆಳಗಿನ ಪ್ರಾರ್ಥನೆ ಮುಗಿಸಿದ್ದರು. ಬಿಸಿ ಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದ ವೇಳೆ, ಸಮೀಪದ ತೋಟದಿಂದ ಹಾರಿಬಂದ ಜೇನು ಹಿಂಡು ಮಕ್ಕಳು ಮತ್ತು ಶಿಕ್ಷಕರ ಮೇಲೆ ದಾಳಿ ಮಾಡಿತು. ಮಕ್ಕಳು ನೋವಿನಿಂದ ಚೀರಾಡುತ್ತಿದ್ದ ಶಬ್ದ ಕೇಳುತ್ತಿದ್ದಂತೆ ಸ್ಥಳೀಯರು…

