​ಕೋಲಾರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಾನೇ ಕೊಂದಿದ್ದು’ ಎಂದು ವಿಡಿಯೋ ಬಿಡುಗಡೆ ಮಾಡಿದ ಆರೋಪಿ!

​ಕೋಲಾರ: ಜಿಲ್ಲೆಯ ಮೆಟ್ಟುಬಂಡೆ ಬಳಿ ಜನವರಿ 27 ರಂದು ನಡೆದಿದ್ದ ಯಲ್ಲೇಶ್ (41) ಎಂಬುವವರ ಭೀಕರ ಹತ್ಯೆ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಬಿಂದು ಕುಮಾರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಹತ್ಯೆಯ ಹೊಣೆಯನ್ನು ತಾನೇ ಹೊತ್ತುಕೊಳ್ಳುವ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದಾನೆ. ​ಸೇಡಿನ ಕಿಚ್ಚಿಗೆ ಬಲಿಯಾದ ಯಲ್ಲೇಶ್: ನರಸಾಪುರದ ಸಂತೋಷ್ ಎಂಬುವವರ ಪುತ್ರ ಬಿಂದು ಕುಮಾರ್, ತಾನು ಹಾಗೂ ಅಕ್ಷಯ್ ತಂಡ ಸೇರಿ ಈ ಕೃತ್ಯ ಎಸಗಿರುವುದಾಗಿ…

Read More

ಯೂತ್ ಕಾಂಗ್ರೆಸ್ ಪಂಜಿನ ಮೆರವಣಿಗೆಯಲ್ಲಿ ಬಣ ರಾಜಕೀಯ: ಕೋಲಾರದಲ್ಲಿ ಗದ್ದಲ

ಕೋಲಾರ: ಮತ ಕಳ್ಳತನ ವಿರೋಧಿಸಿ ಕೋಲಾರ ನಗರದಲ್ಲಿ ಭಾನುವಾರ ನಡೆದ ಯೂತ್ ಕಾಂಗ್ರೆಸ್ ಪಂಜಿನ ಮೆರವಣಿಗೆಯಲ್ಲಿ ಬಣ ರಾಜಕೀಯ ಸ್ಪಷ್ಟವಾಗಿ ಗೋಚರಿಸಿದೆ. ಕಾರ್ಯಕ್ರಮದ ಯಶಸ್ಸಿನ ಶ್ರೇಯಸ್ಸಿಗೆ ಸಂಬಂಧಿಸಿದಂತೆ ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಮತ್ತು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಗಲಾಟೆ ತಾರಕಕ್ಕೇರಿ, ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.ಮೆರವಣಿಗೆಯ ನೇತೃತ್ವವನ್ನು ಯಾರು ವಹಿಸಬೇಕು ಎಂಬುದರ ಕುರಿತು ಎರಡೂ ಬಣಗಳ ನಡುವೆ ವಾಗ್ವಾದ…

Read More