ವಿಜಯನಗರ ಮಹಾವಿದ್ಯಾಲಯದಲ್ಲಿ ಜನಪದ ಸಂಭ್ರಮ: ಸಾಂಪ್ರದಾಯಿಕ ವೈಭವದೊಂದಿಗೆ ಶಿಕ್ಷಣದಲ್ಲಿ ಲಲಿತ ಕಲೆಗಳ ಉದ್ಘಾಟನೆ
ಗದಗ: ಇಲ್ಲಿನ ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ‘ಶಿಕ್ಷಣದಲ್ಲಿ ಲಲಿತ ಕಲೆ ಮತ್ತು ರಂಗಭೂಮಿ ಜನಪದ ಸಂಭ್ರಮ’ ಹಾಗೂ ವಿವಿಧ ಶಾಸ್ತ್ರೋಕ್ತ ಪೂಜಾ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು. ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕುಂಭಮೇಳವು ಜನಪದ ಕಲೆಗಳಾದ ಡೊಳ್ಳು ಕುಣಿತ, ಹಲಗೆ ವಾದನ ಹಾಗೂ ಪಿಪಿ ಊದುವಿಕೆಯೊಂದಿಗೆ ಕಳೆಗಟ್ಟಿತ್ತು. ಸಾಂಪ್ರದಾಯಿಕ ಇಳಕಲ್ ಸೀರೆಯಲ್ಲಿ ಮಿಂಚುತ್ತಿದ್ದ ಮಹಿಳಾ ಪ್ರಶಿಕ್ಷಣಾರ್ಥಿಗಳು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರೆ, ಪುರುಷ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಂಚೆ, ಜುಬ್ಬಾ ಮತ್ತು ರುಮಾಲು…

