ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಯಶಸ್ವಿ: ಭಕ್ತರಿಗೆ ದರ್ಶನ ನೀಡಿದ ರಾಚೋಟೇಶ್ವರ ಶ್ರೀಗಳು; ಸದ್ಯ ಆಸ್ಪತ್ರೆಗೆ ದಾಖಲು
ಗದಗ: ಜಿಲ್ಲೆಯ ಗದಗ ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಪ್ರಸಿದ್ಧ ಬೂದೀಶ್ವರ ಮಠದ ಉತ್ತರಾಧಿಕಾರಿಯಾದ ಪೂಜ್ಯ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಲೋಕ ಕಲ್ಯಾಣ ಹಾಗೂ ವಿಶ್ವಶಾಂತಿಗಾಗಿ ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಮತ್ತು ಮೌನಾನುಷ್ಠಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 10:30ಕ್ಕೆ ಶ್ರೀಗಳು ಗರ್ಭಗುಡಿಯಿಂದ ಹೊರಬಂದು ಸಾವಿರಾರು ಭಕ್ತರಿಗೆ ದರ್ಶನ ನೀಡಿದರು. ಈ ಅಪರೂಪದ ಕ್ಷಣವು ನೆರೆದಿದ್ದ ಲಕ್ಷಾಂತರ ಭಕ್ತರ ಪಾಲಿಗೆ ಭಾವನಾತ್ಮಕ ಹಾಗೂ ಐತಿಹಾಸಿಕ ಕ್ಷಣವಾಗಿ ಪರಿಣಮಿಸಿತು. ಆದರೆ, ಶ್ರೀಗಳ ಆರೋಗ್ಯದಲ್ಲಿ…

