ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ
ಹನೂರು: ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುವ ಕಾಲುನಡಿಗೆ ಮಾರ್ಗದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ದೇವರ ದರ್ಶನದ ಹಂಬಲ ಹೊತ್ತು ಬಂದಿದ್ದ ಪುಟ್ಟ ಬಾಲಕ ಪ್ರಾಣ ಕಳೆದುಕೊಂಡ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಭಕ್ತರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಬೆಂಗಳೂರಿನಿಂದ ಕುಟುಂಬದವರೊಂದಿಗೆ ಬೆಟ್ಟಕ್ಕೆ ಬಂದಿದ್ದ ಹರ್ಷಿತ್, ನಾಗಮಲೆಯತ್ತ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಠಾತ್ತಾಗಿ ದಾಳಿ ಮಾಡಿದ ಚಿರತೆಯು…

