ಭೀಕರ ರಸ್ತೆ ಅಪಘಾತ: ಚಿಂತಾಮಣಿ ಬಳಿ ಶಾಲಾ ವಾಹನ-ಬೈಕ್ ಡಿಕ್ಕಿ, ನಾಲ್ವರು ಸಾವು
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತರಾಗಿ ದುರ್ಘಟನೆ ಸಂಭವಿಸಿದೆ. ಶಾಲಾ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಈ ಭೀಕರ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ವಿವರ: ಚಿಂತಾಮಣಿ ತಾಲ್ಲೂಕಿನ ಬುರುಡಗುಂಟೆ ಬಳಿ ಶಾಲಾ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮೃತರ ಮತ್ತು…

