​ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಬಲಿಯಾದ ಮಾಜಿ ಪಾಲಿಕೆ ಸದಸ್ಯ; ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ದಾವಣಗೇರೆ:ಕೌಟುಂಬಿಕ ಕಲಹದ ಕಿಚ್ಚು ದಾವಣಗೆರೆಯಲ್ಲಿ ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ​ದಾವಣಗೆರೆಯ ನಾಗನೂರು ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಈ ಭೀಭತ್ಸ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮಕ್ಕಳ ಈ…

Read More

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯ ಶ್ರೀಧರ್ ಹೆಸರು ಯಶಸ್ವಿನಿ ಟ್ರಸ್ಟ್‌ನಿಂದ ಡಿಲೀಟ್: ತೀವ್ರ ವಿರೋಧದ ಬಳಿಕ ಕ್ರಮ

ದಾವಣಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನ ಕಾರ್ಯಕ್ರಮದಲ್ಲಿ ಗಣವಸ್ತ್ರ ಧರಿಸಿ ಭಾಗವಹಿಸಿದ್ದ ತಿಪಟೂರಿನ ವೈದ್ಯ ಡಾ. ಶ್ರೀಧರ್ ಅವರನ್ನು ಕರ್ನಾಟಕ ಸರ್ಕಾರದ ಮಹತ್ವದ ‘ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್’ನ (Yeshasvini Trust) ಟ್ರಸ್ಟಿ ಸ್ಥಾನದಿಂದ ತೆಗೆದುಹಾಕಲಾಗಿದೆ. ಟ್ರಸ್ಟಿಯಾಗಿ ಅವರ ನೇಮಕಾತಿಯ ಕುರಿತು ತೀವ್ರ ವಿರೋಧ ಮತ್ತು ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಿನ್ನೆಲೆ ಮತ್ತು ವಿವಾದ:ತಿಪಟೂರು ಮೂಲದ ವೈದ್ಯರಾದ ಡಾ. ಶ್ರೀಧರ್ ಅವರನ್ನು ಇತ್ತೀಚೆಗೆ ಸರ್ಕಾರವು ಯಶಸ್ವಿನಿ ಟ್ರಸ್ಟ್‌ಗೆ ಟ್ರಸ್ಟಿಯಾಗಿ…

Read More

‘ಕಾಂಗ್ರೆಸ್ ವೈಫಲ್ಯ ಮರೆಮಾಚಲು ಸಿಎಂ ಕುರ್ಚಿ ವಿಚಾರದ ಗಾಳಿ ಸುದ್ದಿ’: ಮಾಜಿ ಶಾಸಕ ರಾಜೀವ್ ಪಿ. ಕುಡುಚಿ ಆರೋಪ

ದಾವಣಗೆರೆ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳು ಮತ್ತು ಭ್ರಷ್ಟಾಚಾರದ ಕುರಿತು ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿರುವುದರ ಕುರಿತು ‘ಪರೋಕ್ಷವಾಗಿ ವಿಷಯ ಹರಿಬಿಡುತ್ತಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ರಾಜೀವ್ ಪಿ. ಕುಡುಚಿ ಅವರು ತೀವ್ರ ಸ್ವರೂಪಿ ಆರೋಪ ಮಾಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ದಿನದಿಂದಲೇ ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿದೆ. ರಾಜ್ಯದಾದ್ಯಂತ ಬರಗಾಲ, ಅಭಿವೃದ್ಧಿ…

Read More

ಬೃಹತ್ ಸೈಬರ್ ವಂಚನೆ ಜಾಲ ಭೇದಿಸಿದ ದಾವಣಗೆರೆ ಪೊಲೀಸರು; ₹ 150 ಕೋಟಿ ವಂಚನೆ, ಅಂತರಾಜ್ಯ ಆರೋಪಿ ಸೈಯದ್ ಪಾಸಾ ಆರೆಷ್ಟ

ದಾವಣಗೆರೆ: ದೇಶದ ವಿವಿಧ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಬರೋಬ್ಬರಿ ₹150 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತದ ಆನ್‌ಲೈನ್ ವಂಚನೆ ಎಸಗಿದ್ದ ಅಂತರಾಜ್ಯ ಸೈಬರ್ ವಂಚಕರ ಜಾಲವನ್ನು ದಾವಣಗೆರೆ ಸೈಬರ್ ಕ್ರೈಂ (CEN) ಠಾಣೆ ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಂಧನದ ಮೂಲಕ ದೇಶಾದ್ಯಂತ ಸೈಬರ್ ಕಳ್ಳರ ಆಪರೇಷನ್‌ಗಳಿಗೆ ದಾವಣಗೆರೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ವಂಚನೆ ಬೆಳಕಿಗೆ ಬಂದಿದ್ದು ಹೇಗೆ?ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಹಾಗೂ ಕಟ್ಟಡ ನಿರ್ಮಾಣ ವಲಯದ ಉದ್ಯಮಿ ಪ್ರಮೋದ್ ಎಚ್….

Read More

ಬಸ್ ಹಳ್ಳಕ್ಕೆ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹರಪನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ದಾವಣಗೆರೆಯಿಂದ ಉಚ್ಚಂಗಿದುರ್ಗ, ಮಾದಿಹಳ್ಳಿ ಮಾರ್ಗವಾಗಿ 28 ಪ್ರಯಾಣಿಕರನ್ನು ತುಂಬಿಕೊಂಡು ಹರಪನಹಳ್ಳಿ ಕಡೆಗೆ ಹೊರಟಿದ್ದ ‘ಬನಶಂಕರಿ’ ಖಾಸಗಿ ಬಸ್ ಈ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ…

Read More

ದಾವಣಗೆರೆ ಗಣೇಶೋತ್ಸವ ವಿವಾದ: ಆಕ್ಷೇಪಾರ್ಹ ಫ್ಲೆಕ್ಸ್ ತೆರವು ವಿಳಂಬ; ಪಿಎಸ್‌ಐ ಸೇರಿ ಮೂವರು ಅಮಾನತು

ದಾವಣಗೆರೆ: ಗಣೇಶೋತ್ಸವದ ಪ್ರಯುಕ್ತ ನಗರದ ಮಟ್ಟಿಕಲ್‌ನಲ್ಲಿ ಅಳವಡಿಸಲಾಗಿದ್ದ ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಳಿಸುವ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ, ಪೊಲೀಸ್ ಉಪನಿರೀಕ್ಷಕರೊಬ್ಬರು (ಪಿಎಸ್‌ಐ) ಹಾಗೂ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ. ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ಬಿರಾದಾರ ಮತ್ತು ಪೇದೆಗಳಾದ ಷಣ್ಮುಖ ಹಾಗೂ ವತ್ಸಲಾ ಅಮಾನತುಗೊಂಡಿರುವ ಅಧಿಕಾರಿಗಳು. ಘಟನೆ ಹಿನ್ನೆಲೆನಗರದ ಮಟ್ಟಿಕಲ್‌ನಲ್ಲಿ ವೀರ ಸಾವರ್ಕರ್ ಯುವಕರ ಸಂಘದ ವತಿಯಿಂದ ಗಣೇಶ ಮೂರ್ತಿ…

Read More

ಆಲೂರ ಗ್ರಾಮದ ಅವ್ಯವಸ್ಥೆ ವಿರುದ್ಧ ಆರನೇ ತರಗತಿ ವಿದ್ಯಾರ್ಥಿನಿ ಏಕಾಂಗಿ ಸಮರ!

ದಾವಣಗೆರೆ: ಜಿಲ್ಲಾ ಪಂಚಾಯತ್ ಸಿಇಒಗೆ, ತಾಲ್ಲೂಕು ಪಂಚಾಯತ್ ಇಒಗೆ ಮತ್ತು ಗ್ರಾಮ ಪಂಚಾಯತ್‌ ಪಿಡಿಒಗೆ ನಾಚಿಕೆಯಾಗಬೇಕು! ಆಡಳಿತ ವ್ಯವಸ್ಥೆಯ ಅಸಮರ್ಥತೆ ಎಷ್ಟು ಹೀನಾಯ ಸ್ಥಿತಿಗೆ ತಲುಪಿದೆ ಎಂದರೆ, ಆರನೇ ತರಗತಿಯ ಪುಟಾಣಿ ವಿದ್ಯಾರ್ಥಿನಿಯೊಬ್ಬಳು ತನ್ನ ಗ್ರಾಮದ ಮೂಲಭೂತ ಸೌಕರ್ಯಗಳಿಗಾಗಿ ಏಕಾಂಗಿಯಾಗಿ ಪ್ರತಿಭಟನೆಗೆ ಇಳಿದಿದ್ದಾಳೆ. ದಾವಣಗೆರೆ ಜಿಲ್ಲೆಯ ಆಲೂರು ಗ್ರಾಮದಲ್ಲಿ ನಡೆದ ಈ ಘಟನೆ ಇಡೀ ವ್ಯವಸ್ಥೆಯ ಮುಖಕ್ಕೆ ಬಡಿದ ಕನ್ನಡಿಯಂತಿದೆ. ಆಲೂರು ಗ್ರಾಮ ಪಂಚಾಯತ್ ಎದುರು, ಪಿ.ಬಿ. ಸುಷ್ಮತಾ ಎಂಬ ಹೆಸರಿನ ಈ ಪುಟ್ಟ ವಿದ್ಯಾರ್ಥಿನಿ ಪ್ಲಾಸ್ಟಿಕ್…

Read More