ಡಿಎನ್‌ಎ ರುಜುವಾತು: ಯುವತಿಯನ್ನು ಮದುವೆಯಾಗಲೇಬೇಕು, ತಪ್ಪಿದರೆ ಧರಣಿ: ಕೃಷ್ಣ ರಾವ್‌ಗೆ ಪ್ರತಿಭಾ ಕುಳಾಯಿ ಎಚ್ಚರಿಕೆ

​ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸಲು ಸ್ವಂತ ಖರ್ಚಿನಲ್ಲಿ ವಿವಾಹ ಮಾಡುತ್ತೇನೆ; ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ​ಮಂಗಳೂರು: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್‌ಎ ಪರೀಕ್ಷೆಯಲ್ಲಿ ರುಜುವಾತಾಗಿರುವ ಹಿನ್ನೆಲೆಯಲ್ಲಿ, ಆತ ಮಗುವಿನ ತಾಯಿಯನ್ನು ಕೂಡಲೇ ವಿವಾಹವಾಗಬೇಕು. ತಪ್ಪಿದಲ್ಲಿ, ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ಎಚ್ಚರಿಕೆ ನೀಡಿದ್ದಾರೆ. ​ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು…

Read More

ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ತಹಶೀಲ್ದಾರ್ ಕಚೇರಿ ಕೇಸ್ ವರ್ಕರ್ ಸುನೀಲ ಲೋಕಾಯುಕ್ತ ಬಲೆಗೆ: ತಹಶೀಲ್ದಾರ್ ತಲೆಮರೆಸಿಕೊಂಡಿದ್ದಾರೆ

ಪುತ್ತೂರು: ಅಕ್ರಮ-ಸಕ್ರಮ ಯೋಜನೆಯಡಿ ಮಂಜೂರಾದ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ (ಆಗಸ್ಟ್ 28) ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ತಹಶೀಲ್ದಾರರ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ: ಈಶ್ವರಮಂಗಲದ ನಿವಾಸಿ ಅಜಿತ್ ಅವರ ಚಿಕ್ಕಪ್ಪನವರಿಗೆ ನೆಟ್ಟಣಿಗೆ ಮುನ್ನೂರು ಗ್ರಾಮದಲ್ಲಿ 65 ಸೆಂಟ್ಸ್…

Read More

ಕಡಬ: ಸವಣೂರು ಪರಿಸರದಲ್ಲಿ ಭೀಕರ ಗಾಳಿ; ಅಡಿಕೆ ತೋಟ, ವಿದ್ಯುತ್ ಕಂಬ, ಮನೆಗಳಿಗೆ ಹಾನಿ

ಕಡಬ: ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರಂದು ಮುಂಜಾನೆ 5 ಗಂಟೆಗೆ ಬೀಸಿದ ಭೀಕರ ಗಾಳಿ ಮತ್ತು ಮಳೆಯಿಂದಾಗಿ ಅಂದಾಜು ಲಕ್ಷಾಂತರ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಗಾಳಿಯ ರಭಸಕ್ಕೆ ಹಲವಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸವಣೂರು ಮೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿರುವ ಕೆಡೆಂಜಿ, ಆರೇಡಿ, ಕುದ್ಮನಮಜಲು, ಪಟ್ಟೆಮಡಕೆ ಮತ್ತು ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಈ ಪ್ರದೇಶಗಳ ಹಲವು ಮನೆಗಳಿಗೆ ಹಾನಿಯಾಗಿದ್ದು, ಅಡಿಕೆ ಮತ್ತು ತೆಂಗಿನ…

Read More