ಬಡ ಮಕ್ಕಳ ಬದುಕಿನೊಂದಿಗೆ ಚೆಲ್ಲಾಟ: ಕೊಳಚೆ ನೀರಿನಲ್ಲೇ ತಟ್ಟೆ ತೊಳೆಯುವ ದಯನೀಯ ಸ್ಥಿತಿ!
ಜಮಖಂಡಿ: “ಮಕ್ಕಳನ್ನು ದೇವರ ಸಮಾನ” ಎಂದು ಕರೆಯುವ ನಾವು, ಅದೇ ಮಕ್ಕಳು ಅನುಭವಿಸುತ್ತಿರುವ ಈ ನರಕಸದೃಶ ಸ್ಥಿತಿಯನ್ನು ನೋಡಿ ಮೌನವಹಿಸಿರುವುದು ವ್ಯವಸ್ಥೆಯ ಕ್ರೌರ್ಯಕ್ಕೆ ಹಿಡಿದ ಕನ್ನಡಿಯಂತಿದೆ. ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಕುಡಿಯುವ ನೀರಿಲ್ಲದೆ, ತಾವು ಊಟ ಮಾಡಿದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ದೃಶ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎಷ್ಟಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಕ್ಕಳು ಮಧ್ಯಾಹ್ನದ ಬಿಸಿಯೂಟ ಮುಗಿಸಿದ ನಂತರ ತಟ್ಟೆ ತೊಳೆಯಲು ಕನಿಷ್ಠ…

