ನೆಲಮಂಗಲ:ಕರ್ತವ್ಯದ ವೇಳೆಯೇ ಸಿದ್ದರಬೆಟ್ಟದಲ್ಲಿ ಪಾರ್ಟಿ: 6 ಪಿಡಿಒಗಳು ಅಮಾನತು
ನೆಲಮಂಗಲ: ಕರ್ತವ್ಯದ ವೇಳೆಯೇ ಧಾರ್ಮಿಕ ಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಗುಂಡು-ತುಂಡಿನ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಈ ಪ್ರಕರಣದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ 10(ಡಿ) ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ. ನಡತೆ, ಶಿಸ್ತು,…

