ಮುತ್ತತ್ತಿ ಕಾವೇರಿ ದುರಂತ: ಸೆಲ್ಫಿ ವೇಳೆ ಕಾಲು ಜಾರಿ ಬಿದ್ದ ಮಹಿಳೆ ರಕ್ಷಿಸಲು ಹೋಗಿ ಐವರು ನೀರುಪಾಲು
ಮಂಡ್ಯ, ಜೂ. 24: ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಧಾವಿಸಿದ್ದ ಕುಟುಂಬ ಸದಸ್ಯರು ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಪುತ್ರಿಯರಾದ ಪ್ರಿಯಾಂಕ, ಶ್ವೇತಾ (38) ಮತ್ತು…

