ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಿರಿ, ಪ್ರೀತಿಯಿಂದ ದ್ವೇಷ ಗೆಲ್ಲಿ: ಸಿಎಂ ಸಿದ್ದರಾಮಯ್ಯ ಕರೆ; ಮೈಸೂರು ಬೌದ್ಧ ಮಹಾ ಸಮ್ಮೇಳನದಲ್ಲಿ ಮಾತು

ಮೈಸೂರು: ಜಡಗಟ್ಟಿರುವ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ, ಹೆಚ್ಚು ಜನರಿಗೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು. ಪ್ರತಿಯೊಬ್ಬರೂ ತಮ್ಮಲ್ಲಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆದು ಮನುಷ್ಯರಾಗಬೇಕು. ಪ್ರೀತಿಯಿಂದ ದ್ವೇಷವನ್ನು ಗೆಲ್ಲುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ‘ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025’ ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು…

Read More

ದಸರಾ ಪ್ರೊಟೊಕಾಲ್ ವಿವಾದ: ಮಹಾದೇವಪ್ಪ ಮೊಮ್ಮಗನ ಪೆರೇಡ್, ಹೈಕಮಾಂಡ್ ವರದಿ ಕೇಳಿದ್ದೇಕೆ?

‘ಗೋಲ್ಡನ್ ಟಿಕೆಟ್’ ಪ್ರವಾಸಿಗರಿಗೆ ನಿರಾಕರಣೆ, ಸಚಿವರ ಕುಟುಂಬ ಸದಸ್ಯರಿಗೆ ವಿಶೇಷ ಆತಿಥ್ಯ: ಬಿಜೆಪಿ ಆಕ್ರೋಶ ​ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸರ್ಕಾರಿ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರೊಬ್ಬರ ಮೊಮ್ಮಗನಿಗೆ ಪ್ರೊಟೊಕಾಲ್ ಮೀರಿ ವಿಶೇಷ ಸ್ಥಾನ ನೀಡಲಾಗಿದೆ ಎಂಬ ವಿವಾದ ಈಗ ದೊಡ್ಡ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಉಸ್ತುವಾರಿ ಸಚಿವ ಡಾ. ಸಿ. ಮಹಾದೇವಪ್ಪ ಅವರ ಮೊಮ್ಮಗ ಮುಖ್ಯಮಂತ್ರಿಗಳ ತೆರೆದ ಜೀಪಿನಲ್ಲಿ ಪೆರೇಡ್‌ನಲ್ಲಿ ಭಾಗಿಯಾಗಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ವರದಿ ಕೇಳಿದೆ ಎನ್ನಲಾಗಿದೆ….

Read More

ದಸರಾ ರಾಜಕೀಯ ವಿಷಯವಲ್ಲ, ಸಾಂಸ್ಕೃತಿಕ ಉತ್ಸವ: ವಿರೋಧ ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ದಸರಾ ಉದ್ಘಾಟಕರ ಆಯ್ಕೆ ವಿಚಾರದಲ್ಲಿ ವಿರೋಧ ಪಕ್ಷವಾದ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಅವರಿಗೆ ಸುಪ್ರೀಂ ಕೋರ್ಟ್ ಕೂಡ ಛೀಮಾರಿ ಹಾಕಿದೆ ಎಂದು ಮುಖ್ಯಮಂತ್ರಿಗಳು ಬಿಜೆಪಿಯ ಟೀಕೆಗಳನ್ನು ತಳ್ಳಿಹಾಕಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ರಾಜಕೀಯದ ವಿಷಯವಲ್ಲ, ಇದು ನಾಡಿನ ಸಾಂಸ್ಕೃತಿಕ ಉತ್ಸವ. ಈ ಬಾರಿ ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ…

Read More

ಮೈಸೂರು ದಸರಾಕ್ಕೆ ಬಾನು ಮುಸ್ತಾಕ್ ಚಾಲನೆ: ಭಾವುಕರಾದ ಲೇಖಕಿ, ಸಿಎಂ ಹೇಳಿದ್ದೇನು?

ಮೈಸೂರು: ಹಲವು ಚರ್ಚೆ ಮತ್ತು ವಿವಾದಗಳ ನಡುವೆ, ಖ್ಯಾತ ಲೇಖಕಿ ಬಾನು ಮುಸ್ತಾಕ್ ಅವರು ಬುಧವಾರ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ತಮ್ಮ ಜೀವನದ ಅತ್ಯಂತ ಗೌರವದ ಘಳಿಗೆ ಎಂದು ಬಣ್ಣಿಸಿ ಭಾವುಕರಾದರು.ದಸರಾ ಉದ್ಘಾಟನೆಯ ನಂತರ ಮಾತನಾಡಿದ ಬಾನು ಮುಸ್ತಾಕ್, “ಬೂಕರ್ ಪ್ರಶಸ್ತಿ ಬಂದಾಗ ನನ್ನ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗುವುದಾಗಿ ಹರಕೆ ಹೊತ್ತಿದ್ದಳು. ಈಗ ಸರ್ಕಾರ ನನ್ನನ್ನು ಕರೆಸಿಕೊಂಡಿರುವುದು ದೇವಿಯೇ ಕರೆಸಿಕೊಂಡಂತೆ. ಎಷ್ಟೇ ಅಡೆತಡೆಗಳಿದ್ದರೂ ಚಾಮುಂಡಿ…

Read More

ವಿಶ್ವವಿಖ್ಯಾತ ದಸರಾಕ್ಕೆ ಮೈಸೂರು ಸಜ್ಜು: ನಾಳೆ ನಾಡಹಬ್ಬಕ್ಕೆ ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ನಾಳೆ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ನಗರವನ್ನು ನವ ವಧುವಿನಂತೆ ಶೃಂಗಾರಗೊಳಿಸಲಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಈ ಬಾರಿಯ ದಸರಾ ಉತ್ಸವವನ್ನು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ನಿರ್ಮಲಾ ಸೀತಾರಾಮನ್, ಎಚ್.ಡಿ….

Read More

ಸಮುದಾಯ ಒಗ್ಗಟ್ಟಾದರೆ ಮಾತ್ರ ರಾಜಕೀಯ ಶಕ್ತಿ: ಸಚಿವ ಸಂತೋಷ್ ಲಾಡ್

ಮೈಸೂರು: ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಬದಿಗೊತ್ತಿ ಸಮುದಾಯ ಒಗ್ಗಟ್ಟಾದರೆ ಮಾತ್ರ ರಾಜಕೀಯ ಶಕ್ತಿ ಪಡೆಯಲು ಸಾಧ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದ ಕಲಾಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ ಆಯೋಜಿಸಿದ್ದ ‘ನುಲಿಯ ಚಂದಯ್ಯ’ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.ಅಲೆಮಾರಿ ಸಮುದಾಯಗಳ ಬೇಡಿಕೆಗಳಿಗೆ ಸರ್ಕಾರವು ಸದಾ ಸ್ಪಂದಿಸಲಿದೆ. ಸಮುದಾಯಗಳ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಕೊರಮ, ಕೊರಚ ಸೇರಿದಂತೆ ತಳ ಸಮುದಾಯದವರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಐಎಎಸ್, ಕೆಎಎಸ್‌ನಂತಹ…

Read More

ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಮೈಸೂರು ಪ್ರವಾಸ: ಬಿಗಿ ಭದ್ರತೆಯಲ್ಲಿ ಸಂಚಾರ ನಿರ್ಬಂಧ

ಮೈಸೂರು: ರಾಷ್ಟ್ರಪತಿ ದೌಪದಿ ಮುರ್ಮು ಅವರು ಸೆಪ್ಟೆಂಬರ್ 1 ಮತ್ತು 2ರಂದು ಮೈಸೂರಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಗರದಲ್ಲಿ ವಾಸ್ತವ್ಯ ಹೂಡಿದ್ದು, ಗಣ್ಯರ ಸಂಚಾರದಿಂದಾಗಿ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.10ರ ಸುಮಾರಿಗೆ ರಾಷ್ಟ್ರಪತಿಯವರು ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದರು. ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ನಂತರ, ಅವರು ಮಾನಸಗಂಗೋತ್ರಿಯ ನೈಮಿಶಮ್ ಕ್ಯಾಂಪಸ್‌ನಲ್ಲಿರುವ…

Read More

ಬಾನು ಮುಸ್ತಾಕ್ ಆಯ್ಕೆ ಧರ್ಮಾತೀತ ತೀರ್ಮಾನ, ಟೀಕಿಸುವವರಿಗೆ ಇತಿಹಾಸದ ಅರಿವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವವರು ಇತಿಹಾಸದ ಅರಿವಿಲ್ಲದ ಧರ್ಮಾಂಧರು ಎಂದು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಮೈಸೂರು ದಸರಾ ಉದ್ಘಾಟಕ್ಕೆ ಆಯ್ಕೆ ಕುರಿತ ಉನ್ನತ ಮಟ್ಟದ ಸಮಿತಿಯು ತಮಗೆ ನೀಡಿದ ಅಧಿಕಾರದನ್ವಯ, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. “ದಸರಾ ನಾಡಹಬ್ಬವಾಗಿದ್ದು, ಇದನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ. ನಾಡ ಹಬ್ಬ…

Read More

ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ, ಹಲವರಿಗೆ ಗಾಯ

ಪಿರಿಯಾಪಟ್ಟಣ/ಮೈಸೂರು: ಜಮೀನು ಹಂಚಿಕೆ ವಿಚಾರದಲ್ಲಿ ಉಂಟಾದ ವಿವಾದದಿಂದ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದಾರೆ.ಕಲ್ಲು ಮತ್ತು ದೊಣ್ಣೆಗಳನ್ನು ಹಿಡಿದು ಪರಸ್ಪರ ಹೊಡೆದಾಡಿಕೊಂಡ ಎರಡೂ ಗುಂಪುಗಳಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾಗಿಯಾಗಿದ್ದರು. ಗಾಯಗೊಂಡವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರಜಮೀನು ಉಳುಮೆ ಮಾಡಲು ಹೋದಾಗ ಗಲಾಟೆ ಆರಂಭವಾಗಿದ್ದು, ಒಂದು ಗುಂಪು ಉಳುಮೆ ಮಾಡುವುದನ್ನು ತಡೆದಿದೆ. ಇದರಿಂದ…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ವಿಜಯಪುರ/ ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿದ್ದೇನು?ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, “ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ…

Read More