ನುಡಿದಂತೆ ನಡೆಯುವ ಸರ್ಕಾರ ನಮ್ಮದು: ಸಿಎಂ ಸಿದ್ದರಾಮಯ್ಯ; ಯುವನಿಧಿ ನಿಲ್ಲಿಸುವ ಸುಳ್ಳುಗಳಿಗೆ ಕಿವಿಗೊಡಬೇಡಿ
ಮೈಸೂರು: ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಯುವನಿಧಿ ಭತ್ಯೆಯನ್ನು ನಿಲ್ಲಿಸಲಾಗುವುದು ಹೊರತು, ಕೌಶಲ್ಯ ತರಬೇತಿಗೆ ಬಂದರೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಯುವಜನರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯೋಜಿಸಿದ್ದ “ಬೃಹತ್ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ಮೋದಿಯವರ ವಿರುದ್ಧ ಸಿಎಂ ವಾಗ್ದಾಳಿ: ಸುಳ್ಳು ಭರವಸೆಗೆ ಕಿವಿಗೊಡಬೇಡಿಮಾತು ತಪ್ಪಿ ನಡೆಯಲು ನಾನು ಪ್ರಧಾನಿ…

