ನೀರಾವರಿ ಯೋಜನೆಗಳಿಗಾಗಿ ಒಟ್ಟಾಗಿ ಹೋರಾಟ ಮಾಡಿ: ಬಿಜೆಪಿ ನಾಯಕರಿಗೆ ಡಿಕೆಶಿ ಸವಾಲು”ಮರಳಿ ಅಧಿಕಾರಕ್ಕೆ ಬರುತ್ತೇವೆ, ಈಗಿನಿಂದಲೇ ಸಿದ್ಧತೆ ನಡೆಸಿ” – ಕಾರ್ಯಕರ್ತರಿಗೆ ಡಿಸಿಎಂ ಕರೆ
ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಯಚೂರು ತಾಲ್ಲೂಕಿನ ಪಂಚಮುಖಿಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ ನೀರಾವರಿ ಯೋಜನೆಗಳು, ಪಕ್ಷ ಸಂಘಟನೆ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳು ಕುರಿತು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ನಾಯಕರು ರಾಜಕೀಯ ಬಿಟ್ಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕಲು ಬರಲಿ ಎಂದು ಅವರು ಬಹಿರಂಗ ಸವಾಲೆಸೆದರು. ನೀರಾವರಿ ಯೋಜನೆಗಳ ವಿಚಾರದಲ್ಲಿ ಬಿಜೆಪಿ ನಾಯಕರಿಗೆ…

