ರಾಯಚೂರಿನಲ್ಲಿ ಕಟ್ಟಡದ ಚಾವಣಿ ಕುಸಿತ ದುರಂತ: ಮೂವರು ವಿದ್ಯಾರ್ಥಿಗಳ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ
ರಾಯಚೂರು: ನಗರದ ಬಸ್ ನಿಲ್ದಾಣದ ಸಮೀಪದ ವಿಆರ್ಎಲ್ ಕಚೇರಿ ಬಳಿ ಇರುವ ಕಟ್ಟಡವೊಂದರ ಚಾವಣಿ ಭಾನುವಾರ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ನಾಗರಾಜ್ ಕ್ಯಾದಿಗೇರಾ (21) ಹಾಗೂ ರವಿ ಕುಮಾರ ಸಮುದ್ರ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಅರ್ಜುನ್ ಕೋತಿಗುಡ್ಡ ಅವರನ್ನು ತಕ್ಷಣ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ. ಪ್ರಭು ಮಾತ್ರಳ್ಳಿ ಹಾಗೂ ಉಮೇಶ್ ಎಚ್.ಎನ್….

