ಅರೇಮುರಾಳ:ನಿರಂತರ ಮಳೆಗೆ ಮನೆ ಕುಸಿತ: ನಾಲ್ವರಿಗೆ ಗಂಭೀರ ಗಾಯ,
ಮುದ್ದೇಬಿಹಾಳ: ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಸುರಿದ ನಿರಂತರ ಮಳೆಗೆ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದಾಯ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಘಟನೆಯಲ್ಲಿ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ, ಮತ್ತು ರುಶಾಂತ ಬಂಡಿವಡ್ಡರ ಗಾಯಗೊಂಡಿದ್ದು, ಮನೆಯಲ್ಲಿದ್ದ ಬಹುತೇಕ ಎಲ್ಲಾ ಸಾಮಗ್ರಿಗಳು ಮತ್ತು ದೈನಂದಿನ ಬಳಕೆ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಮಧ್ಯರಾತ್ರಿ ಘಟನೆ ನಡೆದಿದ್ದರೂ, ಗ್ರಾಮ ಪಂಚಾಯಿತಿ…

