ಅರೇಮುರಾಳ:ನಿರಂತರ ಮಳೆಗೆ ಮನೆ ಕುಸಿತ: ನಾಲ್ವರಿಗೆ ಗಂಭೀರ ಗಾಯ,

ಮುದ್ದೇಬಿಹಾಳ: ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಸುರಿದ ನಿರಂತರ ಮಳೆಗೆ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದಾಯ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಘಟನೆಯಲ್ಲಿ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ, ಮತ್ತು ರುಶಾಂತ ಬಂಡಿವಡ್ಡರ ಗಾಯಗೊಂಡಿದ್ದು, ಮನೆಯಲ್ಲಿದ್ದ ಬಹುತೇಕ ಎಲ್ಲಾ ಸಾಮಗ್ರಿಗಳು ಮತ್ತು ದೈನಂದಿನ ಬಳಕೆ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಮಧ್ಯರಾತ್ರಿ ಘಟನೆ ನಡೆದಿದ್ದರೂ, ಗ್ರಾಮ ಪಂಚಾಯಿತಿ…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ವಿಜಯಪುರ/ ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿದ್ದೇನು?ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, “ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ…

Read More

ಕುಂಚಗನೂರ ಗ್ರಾಮಸ್ಥನನ್ನು ನದಿಗೆ ಸೆಳೆದೊಯ್ದ ಮೊಸಳೆ; ಶೋಧ ಕಾರ್ಯ ಬಿರುಸು

ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಬಳಿ ಇರುವ ಕೃಷ್ಣಾ ನದಿಯಲ್ಲಿ ಮೊಸಳೆಯೊಂದು ಗ್ರಾಮಸ್ಥನೊಬ್ಬನನ್ನು ನೀರಿಗೆ ಸೆಳೆದೊಯ್ದಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಾಶಪ್ಪ ಹಣಮಂತ ಕಂಬಳಿ (38) ಎಂಬಾತನೇ ಮೊಸಳೆಗೆ ಬಲಿಯಾದ ದುರ್ದೈವಿ. ಅಮವಾಸ್ಯೆ ಇದ್ದ ಕಾರಣ, ಕಾಶಪ್ಪ ತನ್ನ ಎರಡು ಎತ್ತುಗಳಿಗೆ ನದಿಯಲ್ಲಿ ಮೈ ತೊಳೆಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ದಿಢೀರ್‌ ದಾಳಿ ನಡೆಸಿದ ಮೊಸಳೆ, ಆತನನ್ನು ನೀರಿನೊಳಗೆ ಸೆಳೆದೊಯ್ದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ…

Read More

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯ 8 ರೌಡಿಗಳ ಗಡಿಪಾರು: ಎಸ್‌ಪಿ ಲಕ್ಷ್ಮಣ ನಿಂಬರಗಿ

ವಿಜಯಪುರ: ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 8 ರೌಡಿಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1,212 ರೌಡಿಶೀಟರ್‌ಗಳಿದ್ದು, ಇದರಲ್ಲಿ ಪ್ರಮುಖ 27 ರೌಡಿಗಳನ್ನು ಗಡಿಪಾರು ಮಾಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ವಿಚಾರಣೆ ನಡೆದು, ಎಂಟು ಜನರ ಗಡಿಪಾರಿಗೆ ಆದೇಶ ನೀಡಲಾಗಿದೆ. ಉಳಿದ 19 ಜನರ ಗಡಿಪಾರಿಗೂ ಕ್ರಮ…

Read More

ಬೀದಿ ನಾಯಿಗಳಿಂದ ಕುರಿಮರಿಗಳ ಮೇಲೆ ದಾಳಿ: 23 ಕುರಿಗಳು ಸಾವು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ

ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ನಿಜಲಿಂಗಪ್ಪ ನಗರದ ಸಮೀಪ ಭಾನುವಾರ ನಡೆದ ಘಟನೆಯಲ್ಲಿ ಬೀದಿ ನಾಯಿಗಳ ಹಿಂಡು ಕುರಿ ಹಟ್ಟಿಯ ಮೇಲೆ ದಾಳಿ ನಡೆಸಿ 23 ಕುರಿಮರಿಗಳನ್ನು ಸಾಯಿಸಿವೆ. ಈ ಘಟನೆಯಿಂದಾಗಿ ಕುರಿಗಾಹಿಗಳು ಲಕ್ಷಾಂತರ ರೂಪಾಯಿ ನಷ್ಟಕ್ಕೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ದಾಳಿಯ ವಿವರಗ್ರಾಮದ ಕುರಿಗಾಹಿ ಹುಲುಗಪ್ಪ ಎಂಬುವವರಿಗೆ ಸೇರಿದ ಕುರಿಹಟ್ಟಿಯಲ್ಲಿ ಮರಿಗಳನ್ನು ಕೂಡಿಹಾಕಲಾಗಿತ್ತು. ಎಂದಿನಂತೆ ಹುಲುಗಪ್ಪ ಅವರು ಕುರಿಗಳನ್ನು ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದಾಗ, ಬೀದಿ ನಾಯಿಗಳ ಹಿಂಡು ಹಟ್ಟಿಯ…

Read More