​ಶಿಗ್ಗಾಂವ: ತಾ: ಹೊಸೂರು ಗ್ರಾಮದಲ್ಲಿ ಅಂಬೇಡ್ಕರ್ ಮೂರ್ತಿಗೆ ಸಗಣಿ ಬಳಿದು ವಿಕೃತಿ: ದಲಿತರ ಮೇಲೆ ಹಲ್ಲೆ ಆರೋಪ, ಗ್ರಾಮದಲ್ಲಿ ಉದ್ವಿಗ್ನತೆ

ಶಿಗ್ಗಾವಿ: ತಾಲೂಕಿನ ಹೊಸೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಸಗಣಿ ಬಳಿದು ಅಪಮಾನ ಮಾಡಿರುವ ಘಟನೆ ನಡೆದಿದೆ. ಈ ಕೃತ್ಯದ ಬೆನ್ನಲ್ಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವ ಗಂಭೀರ ಆರೋಪವೂ ಕೇಳಿಬಂದಿದೆ. ​ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ದಲಿತರನ್ನು ಮೇಲ್ವರ್ಗದವರು ಬಹಿಷ್ಕರಿಸಿದ್ದು, ಯಾವುದೇ ದೇವಸ್ಥಾನಗಳ ಒಳಗೆ ಪ್ರವೇಶ ನೀಡದೆ ತಾರತಮ್ಯ ಎಸಗುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಇದರ ನಡುವೆ, ಭಾನುವಾರ ರಾತ್ರಿ…

Read More

ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: ಹಾವೇರಿಯಲ್ಲಿ ಸಿಎಂಗೆ ಬೃಹತ್ ಹೂಮಾಲೆ ಸನ್ಮಾನ, ಡಿಕೆಶಿ ಅವರಿಂದ ಸಿಹಿ ಹಂಚಿಕೆ

​ಹಾವೇರಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಕಾಲ ಜನಸೇವೆಗೈದ ಧೀಮಂತ ನಾಯಕ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾವೇರಿ ಜಿಲ್ಲೆಯ ಜನತೆ ಮತ್ತು ಅಭಿಮಾನಿಗಳು ಅಭೂತಪೂರ್ವ ಸನ್ಮಾನ ಮಾಡಿದರು. ಹಾವೇರಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯು ಈ ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾಯಿತು. ಸಿದ್ದರಾಮಯ್ಯ ಅವರ ಈ ಸಾಧನೆಯನ್ನು ಸಂಭ್ರಮಿಸಿದ ಜಿಲ್ಲೆಯ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಅವರಿಗೆ ಬೃಹತ್ ಹೂಮಾಲೆಯನ್ನು ಹಾಕುವ ಮೂಲಕ ತಮ್ಮ…

Read More

ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಸರ್ಕಾರ ಬದ್ಧ: ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಶೀಘ್ರವೇ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಾವೇರಿಯಲ್ಲಿಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ ಹಾಗೂ ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಅವರು, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅದ್ಧೂರಿ ಉದ್ಘಾಟನೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ…

Read More

ಒಳನಾಡು ಮೀನುಗಾರಿಕೆಗೆ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ: ಯಾಸಿನ್ ಮುಜಾವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

​ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ​ಹಾವೇರಿ/ಬೆಂಗಳೂರು, ನವೆಂಬರ್ 22: ರಾಜ್ಯದ ಒಳನಾಡು ಮೀನುಗಾರಿಕಾ ವಿಭಾಗದಲ್ಲಿ ಹಾವೇರಿ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ಈ ಸಾಧನೆಗಾಗಿ ಕಂಚರಗಟ್ಟಿ ಗ್ರಾಮದ ಶ್ರೀ ಯಾಸಿನ್ ಅಬ್ದುಲ್ ಸಾಬ್ ಮುಜಾವರ್ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು. ​ಮೀನುಗಾರಿಕಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಯಾಸಿನ್ ಮುಜಾವರ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಸಚಿವರಾದ ಮೊಣಕಾಲು ವೈದ್ಯ ಮತ್ತು ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಕುರಿಗಾಹಿ ಆತ್ಮಹತ್ಯೆ: ನಾಲ್ವರ ಬಂಧನ

ಮರಣಪೂರ್ವ ವಿಡಿಯೋದಲ್ಲಿ ಕಿರುಕುಳದ ಬಗ್ಗೆ ಮಾಹಿತಿ ನೀಡಿದ ಯುವಕ ​ಹಾವೇರಿ: ಪತ್ನಿ ಹಾಗೂ ಆಕೆಯ ಕುಟುಂಬದವರಿಂದ ತೀವ್ರ ಕಿರುಕುಳಕ್ಕೆ ಬೇಸತ್ತ ಕುರಿಗಾಹಿಯೊಬ್ಬ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ನಿವಾಸಿ ಮಂಜುನಾಥ ಚಿಲ್ಲೋಜಿ (26) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಸೇರಿದಂತೆ ನಾಲ್ವರನ್ನು ಹಿರೇಕೆರೂರು ಪೊಲೀಸರು ಬಂಧಿಸಿದ್ದಾರೆ. ​ಹಿರೇಕೆರೂರಿನಲ್ಲಿ ದುರಂತ ಅಂತ್ಯ…

Read More

ವೈದ್ಯರು-ನರ್ಸ್‌ಗಳ ನಿರ್ಲಕ್ಷ್ಯಕ್ಕೆ ಮಗು ಬಲಿ: ‘ಮೊಬೈಲ್ ಮಾತುಕತೆ’ಯಲ್ಲಿ ಮಗ್ನರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವರೇ ಸಚಿವರು?

🚨 ವೈದ್ಯರು-ನರ್ಸ್‌ಗಳ ನಿರ್ಲಕ್ಷ್ಯಕ್ಕೆ ಮಗು ಬಲಿ: ‘ಮೊಬೈಲ್ ಮಾತುಕತೆ’ಯಲ್ಲಿ ಮಗ್ನರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವರೇ ಸಚಿವರು? ಹಾವೇರಿ: ರಾಜ್ಯದಲ್ಲಿ ಆರೋಗ್ಯ ಸೇವೆಗಳ ಸುಧಾರಣೆ ಕುರಿತು ಸರ್ಕಾರಗಳು ಎಷ್ಟೇ ಭರವಸೆ ನೀಡಿದರೂ, ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳ ಕರ್ತವ್ಯ ಲೋಪ ಹಾಗೂ ಅಮಾನವೀಯ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶುವಿನ ಅಮೂಲ್ಯ ಜೀವ ಬಲಿಯಾದ ತೀವ್ರ ಆಘಾತಕಾರಿ ಘಟನೆ ಸಂಭವಿಸಿದೆ. ಬೆಡ್‌ ಸಿಗದೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ಶೌಚಾಲಯದತ್ತ ತೆರಳುವ ಮಾರ್ಗದಲ್ಲೇ ಹೆರಿಗೆಯಾಗಿ, ಮಗು ನೆಲಕ್ಕೆ…

Read More

ಹಾವೇರಿ: ಮದುವೆ ವಂಚನೆ ಆರೋಪ: ಯುವತಿ ಆತ್ಮಹತ್ಯೆ, ಆರೋಪಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

​ಹಾವೇರಿ/ರಾಣೆಬೆನ್ನೂರು: ‘ಪ್ರೇಮಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಸಿಂಧೂರಿ ಪರಮೇಶಪ್ಪ ಪರಣ್ಣನವರ (26) ಎಂಬ ಯುವತಿ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿಯ ಸಾವಿಗೆ ಪ್ರೇಮಿ, ಆತನ ಕುಟುಂಬಸ್ಥರು ಮತ್ತು ಪೊಲೀಸರೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ರಾಣೆಬೆನ್ನೂರು ತಾಲ್ಲೂಕಿನ ಕುದರಿಹಾಳ ಗ್ರಾಮದಲ್ಲಿರುವ ಆರೋಪಿತ ಯುವಕನ ಮನೆ ಮುಂದೆ ಮೃತದೇಹವಿಟ್ಟು ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ​ವಂಚನೆ ಮತ್ತು ಪೊಲೀಸರ ನಡೆ ಬಗ್ಗೆ ಆರೋಪ: ​ಸಿಂಧೂರಿ ಮತ್ತು ಶರತ್…

Read More

ಹಾವೇರಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಿತಳಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

ಹಾನಗಲ್ಲ: ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ: ಇನ್‌ಸ್ಟಾಗ್ರಾಮ್ (Instagram) ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವಿವರ:ಆರೋಪಿಗಳು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು, ನಂತರ ಆಕೆಯನ್ನು ಪುಸಲಾಯಿಸಿ ಸರಣಿ ಅತ್ಯಾಚಾರ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ಕುಟುಂಬಸ್ಥರು ದೂರು ನೀಡಿದ ಬೆನ್ನಲ್ಲೇ ಹಾನಗಲ್ಲ ಪೊಲೀಸರು ತಕ್ಷಣ…

Read More

ಹಟ್ಟಿ ಹಬ್ಬದ ದುರಂತ: ಹಾವೇರಿಜಿಲ್ಲೆಯಲ್ಲಿ ಹೋರಿ ತಿವಿದು ನಾಲ್ವರು ಬಲಿ, ಶೋಕ ಮಡುವು

ಹಾವೇರಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಹಟ್ಟಿ ಹಬ್ಬದ ಆಚರಣೆ ವೇಳೆ ಬುಧವಾರ ಸಂಭವಿಸಿದ ನಾಲ್ಕು ಪ್ರತ್ಯೇಕ ದುರಂತಗಳಲ್ಲಿ ಕೊಬ್ಬರಿ ಹೋರಿಗಳ ತಿವಿತಕ್ಕೆ ಸಿಲುಕಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಒಂದೇ ದಿನ ನಾಲ್ಕು ಪ್ರಾಣಹಾನಿ ಸಂಭವಿಸಿರುವುದು ಜಿಲ್ಲೆಯಲ್ಲಿ ಶೋಕದ ವಾತಾವರಣಕ್ಕೆ ಕಾರಣವಾಗಿದೆ. ಹಾವೇರಿ ನಗರ, ಹಾನಗಲ್ಲ ಮತ್ತು ಹಾವೇರಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಈ ದುರ್ಘಟನೆಗಳು ನಡೆದಿವೆ. ಹಾವೇರಿ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರೆ ಅಂಗವಾಗಿ ಆಯೋಜಿಸಲಾಗಿದ್ದ ಹೋರಿ ಹಬ್ಬದ ಸ್ಪರ್ಧೆಯ ಸಂದರ್ಭದಲ್ಲಿ…

Read More

ದೇವರಗುಡ್ಡದ ದೈವವಾಣಿಯ ಕಾರಣಿಕ “ನಾಡು ಬಂಗಾರದ ಗಿಂಡಿಲೇ, ನಾಡು ಸಿರಿಯಾತಲೆ ಪರಾಕ್”

ದೇವರಗುಡ್ಡ, (ಸಮೃದ್ಧಿ): ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ದೇವರಗುಡ್ಡದಲ್ಲಿ ಶ್ರೀ ಮಾಲತೇಶ ಸ್ವಾಮಿಯ 2025ನೇ ವರ್ಷದ ಕಾರಣಿಕ (ದೈವವಾಣಿ) ನುಡಿಯಲಾಗಿದ್ದು, “ನಾಡು ಬಂಗಾರದ ಗಿಂಡಿಲೇ, ನಾಡು ಸಿರಿಯಾತಲೆ ಪರಾಕ್” ಎಂಬ ಕಾರ್ಣಿಕ ವಾಣಿ ನುಡಿಯಲಾಗುದ್ದು. ಇದರ ಅರ್ಥಾತ್ ರಾಜ್ಯದಾದ್ಯಂತ ಉತ್ತಮ ಮಳೆ-ಬೆಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. ಎಂಬ ಗೂಢಾರ್ಥವುಳ್ಳ ದೈವವಾಣಿಯನ್ನು ಪ್ರಕಟಿಸಲಾಗಿದೆ. ಈ ವರ್ಷದ ದೈವವಾಣಿಯ ವಿಶ್ಲೇಷಣೆಯ ಪ್ರಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ವಿಶೇಷವಾಗಿ ಹಿಂಗಾರು ಬೆಳೆಯು ಸಹ ಅತ್ಯಂತ…

Read More