ರಾಣೇಬೆನ್ನೂರು ವೈದ್ಯರ ಮೇಲಿನ ಹಲ್ಲೆ ಪ್ರಕರಣ: ದೂರು-ಪ್ರತಿ ದೂರು ದಾಖಲು, ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ರಾಣೇಬೆನ್ನೂರು: ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ನಗರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಗರದ ಕೋಟೆ ಓಣಿಯಲ್ಲಿರುವ ಕ್ಲಿನಿಕ್‌ಗೆ ನುಗ್ಗಿದ 20-30 ಜನರ ಗುಂಪು ವೈದ್ಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.ನಗರದ ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಈ ದಾಳಿ ನಡೆದಿದೆ. ಘಟನೆ ವೇಳೆ ಡಾ. ಗುರುಮೂರ್ತಯ್ಯ ಅವರ ಕ್ಲಿನಿಕ್ ಎದುರು ನಿಲ್ಲಿಸಿದ್ದ ಬೈಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೊಮ್ಮಾಯಿ ಕಚೇರಿ ಎದುರು ಪ್ರತಿಭಟನೆ ಕೇಂದ್ರ ಸರ್ಕಾರದಿಂದ ಸಾಲ ಮನ್ನಾ ಮಾಡುವಂತೆ ಒತ್ತಾಯ

ಹಾವೇರಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮತ್ತು ದಬ್ಬಾಳಿಕೆಗೆ ಬೇಸತ್ತ ನೊಂದ ಜನರು, ಅವುಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಗುರುವಾರ ಸಂಸದ ಬಸವರಾಜ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಾವೇರಿಯ ತಾಲ್ಲೂಕು ಪಂಚಾಯತ್ ಆವರಣದಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನಕಾರರು ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೀದಿಗೆ ಬಂದ ಬಡ ಮಹಿಳೆಯರುಪ್ರತಿಭಟನಕಾರರು ಮಾತನಾಡಿ, “ಜಿಲ್ಲೆಯಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ವಿಪರೀತವಾಗಿದೆ. ಬಡ ಮತ್ತು ಗ್ರಾಮೀಣ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಲಭವಾಗಿ ಸಾಲ ನೀಡಿ, ನಂತರ…

Read More

ಕಳ್ಳರ ಕೈಚಳಕ: ಹಾವೇರಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಲಕ್ಷ ರೂ. ಹೆಚ್ಚಿನ ಮೌಲ್ಯದ ಬ್ಯಾರೇಜ್ ಗೇಟ್‌ಗಳ ಕಳ್ಳತನ

ಹಾವೇರಿ: ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರುಪಯೋಗಪಡಿಸಿಕೊಂಡಿರುವ ಕಳ್ಳರು, ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಕಬ್ಬಿಣದ ಗೇಟ್‌ಗಳನ್ನು ಕಳ್ಳತನ ಮಾಡಿದ್ದಾರೆ. ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ಒಂದುವರೆ ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸುಮಾರು 98 ಗೇಟ್‌ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಲಾಖೆಯ ನಿರ್ಲಕ್ಷ್ಯವೇ ಕಳ್ಳರ ಕರಾಮತ್ತಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕಳ್ಳತನ ನಡೆದಿರುವುದು ಇದೇ ಮೊದಲಲ್ಲ. ಕಳೆದ…

Read More

ಡಿ.ಜೆ.ಗೆ ನಿರ್ಬಂಧ: ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಹಾವೇರಿಯಲ್ಲಿ ಮೊದಲ ಎಫ್‌ಐಆರ್‌ ದಾಖಲು!

ಹಾವೇರಿ: ಗಣೇಶೋತ್ಸವದ ಮೆರವಣಿಗೆಗಳಲ್ಲಿ ಡಿ.ಜೆ. (ಡಿಸ್ಕ್ ಜಾಕಿ) ಬಳಸದಂತೆ ಸರ್ಕಾರ ನೀಡಿರುವ ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಹಾವೇರಿ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ನಿಯಮ ಮೀರಿ ಡಿ.ಜೆ. ಬಳಸಿದ ಆರೋಪದಡಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ ಗಣೇಶೋತ್ಸವದ ಮೊದಲ ಎಫ್‌ಐಆರ್ ದಾಖಲಾಗಿದೆ. ಯುವ ಸಮುದಾಯ ಸಂಭ್ರಮದ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಕಾನೂನು ಕ್ರಮ ಎದುರಿಸುವುದು ಅನಿವಾರ್ಯ ಎಂಬುದನ್ನು ಈ ಘಟನೆ ಎತ್ತಿ ತೋರಿಸಿದೆ. ಘಟನೆ ವಿವರಹಾವೇರಿಯ ಸುಭಾಷ್ ವೃತ್ತದಲ್ಲಿ ‘ಹಾವೇರಿ…

Read More

ಸಾವಿನಲ್ಲೂ ಒಂದಾದ ನಂದಿಹಳ್ಳಿ ಗ್ರಾಮದ ದಂಪತಿ: ಪತಿಯ ಅಂತ್ಯಕ್ರಿಯೆಯಲ್ಲೇ ಪತ್ನಿ ಸಾವು

ಹಾವೇರಿ: “ಜೊತೆಯಾಗಿ ಬಾಳೋಣ, ಜೊತೆಯಾಗಿ ಸಾಯೋಣ” ಎಂಬ ಮಾತುಗಳೇ ಬದುಕು ಹಾಗೂ ಸಾವಿನಲ್ಲಿ ಅಕ್ಷರಶಃ ಸತ್ಯವಾಗಿವೆ. ಪತಿಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೇ ಪತ್ನಿಯೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಮೃತಪಟ್ಟ ದಂಪತಿಯನ್ನು ವೀರಬಸಪ್ಪ ಗೋಣಿಗೇರ (70) ಮತ್ತು ಬಸಮ್ಮ (60) ಎಂದು ಗುರುತಿಸಲಾಗಿದೆ. ಈ ದಂಪತಿ ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದ್ದರು. ಘಟನೆಯ ವಿವರ:ಭಾನುವಾರ ಬೆಳಿಗ್ಗೆ ವೀರಬಸಪ್ಪ ಅವರು…

Read More

ಶಿಗ್ಗಾಂವಿ: ಸೋರುತ್ತಿದೆ ಬಂಕಾಪುರ ಸರ್ಕಾರಿ ಆಸ್ಪತ್ರೆ, ರೋಗಿಗಳ ಸಂಕಟಕ್ಕೆ ಅಂತ್ಯವಿಲ್ಲ

ಶಿಗ್ಗಾಂವಿ: ಮೂರು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಗೆ ಬಂಕಾಪುರ ಸರ್ಕಾರಿ ಆಸ್ಪತ್ರೆಯ ಹೊಸ ಕಟ್ಟಡ ಸೋರುತ್ತಿದ್ದು, ಚಿಕಿತ್ಸೆಗಾಗಿ ಬರುವ ರೋಗಿಗಳು ಮತ್ತಷ್ಟು ಸಂಕಟಕ್ಕೆ ಸಿಲುಕಿದ್ದಾರೆ. ಇದು ಕೇವಲ ಗೋಡೆಗಳಿಂದ ನೀರು ಸೋರುತ್ತಿರುವ ವಿಷಯವಲ್ಲ, ಬದಲಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳ ಆರೋಗ್ಯ ಮತ್ತು ಸುರಕ್ಷತೆ ಅಪಾಯಕ್ಕೊಳಗಾಗಿರುವ ಗಂಭೀರ ಸಮಸ್ಯೆಯಾಗಿದೆ. ಆಸ್ಪತ್ರೆಯ ಜನರಲ್ ವಾರ್ಡ್‌ನ ಹಾಸಿಗೆಗಳ ಬಳಿಯೇ ನೀರು ತೊಟ್ಟಿಕ್ಕುತ್ತಿರುವುದರಿಂದ ರೋಗಿಗಳು ತಮ್ಮ ರೋಗದ ನೋವಿನ ಜೊತೆಗೆ ಸೋರುತ್ತಿರುವ ಕಟ್ಟಡದ ಕಿರಿಕಿರಿಯನ್ನೂ ಸಹಿಸಿಕೊಳ್ಳುವಂತಾಗಿದೆ. ಗ್ರಾಮೀಣ ಭಾಗದ ಜನರಿಗೆ ಇದೇ ಆಸ್ಪತ್ರೆ…

Read More

ಹಾವೇರಿ:ಕಡರನಾಯ್ಕನಹಳ್ಳಿ: ತುಂಗಭದ್ರಾ ನದಿ ಪ್ರವಾಹಕ್ಕೆ ಉಕ್ಕಡಗಾತ್ರಿ ಜಲಾವೃತ

ಹಾವೇರಿ:ಕಡರನಾಯ್ಕನಹಳ್ಳಿ: ತುಂಗಾ ಮತ್ತು ಭದ್ರಾ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿದ ಕಾರಣ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಹಾವೇರಿ ಜಿಲ್ಲೆಯ ಕಡರನಾಯ್ಕನಹಳ್ಳಿ ಸಮೀಪದ ಉಕ್ಕಡಗಾತ್ರಿ ಪರಿಸರ ಜಲಾವೃತಗೊಂಡಿದೆ. ಇದರಿಂದಾಗಿ ರೈತರು ಮತ್ತು ಸ್ಥಳೀಯರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆ ಸಂಚಾರಕ್ಕೆ ಅಡಚಣೆ, ಭಕ್ತರಿಗೆ ತೊಂದರೆ:ಉಕ್ಕಡಗಾತ್ರಿ-ಪತ್ಯಾಪುರ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ರಾಣೇಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿ ಮೂಲಕ ಮಾಳನಾಯ್ಕನಹಳ್ಳಿ ಮಾರ್ಗವಾಗಿ ಉಕ್ಕಡಗಾತ್ರಿಗೆ ತಲುಪುವ ರಸ್ತೆಯೂ ಜಲಾವೃತಗೊಳ್ಳುವ ಸಾಧ್ಯತೆ ಇದೆ.ಶ್ರಾವಣ ಸೋಮವಾರದಂದು ಅಜ್ಜಯ್ಯನ ದರ್ಶನಕ್ಕೆ ಬಂದ ಭಕ್ತರು ಹೆಚ್ಚಾಗಿದ್ದು, ಪ್ರವಾಹದಿಂದಾಗಿ ಅವರಿಗೆ…

Read More

ದುರಂತ: ಹಾವೇರಿ ಬಳಿ ಮೋಟೆಬೆನ್ನೂರ ಗ್ರಾಮದ‌ ರಾಷ್ಟ್ರೀಯ ಹೆದ್ದಾರಿ (48)ರಲ್ಲಿ ಬಸ್ ಅಪಘಾತ, ಇಬ್ಬರು ಸಾವು, ಆರು ಮಂದಿಗೆ ಗಾಯ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಮೃತಪಟ್ಟವರನ್ನು ಬಾಲಕಿ ಅರ್ನವಿ (11 ವರ್ಷ) ಹಾಗೂ ಯಶ್ (20 ವರ್ಷ) ಎಂದು ಗುರುತಿಸಲಾಗಿದೆ. ಈ ಬಸ್ ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆಗೆ ಹೊರಟಿತ್ತು. ಘಟನಾ ವಿವರ:ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬಸ್ಸು ಹೋಗುತ್ತಿದ್ದಾಗ,…

Read More