ಹಾಸನದಲ್ಲಿ ದೇವರಿಗೆ ಪಾದ ರಕ್ಷೆ ಹಾರ: ವಿಜಯಪುರ ಶಾಸಕ ಯತ್ನಾಳ್ ಗರಂ

ಹಾಸನ: ರಾಜ್ಯದಲ್ಲಿ ಹಿಂದೂ ವಿಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದ ದಾರುಣ ಘಟನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ. ಈ ಘಟನೆಯನ್ನು “ಹೇಯ ಮತ್ತು ಖಂಡನೀಯ” ಎಂದು ಬಣ್ಣಿಸಿರುವ ಯತ್ನಾಳ್, ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು…

Read More

ಹಾಸನ ದುರಂತ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ – ಸಚಿವ ಕೃಷ್ಣ ಬೈರೇಗೌಡ

ಹಾಸನ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಲಾರಿ ಹರಿದು 06 ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು…

Read More

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿ ನುಗ್ಗಿ 6 ಸಾವು, ಅಂದಾಜು:20ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ: ತಾಲ್ಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿ ನುಗ್ಗಿದ ದಾರುಣ ಘಟನೆ ನಡೆದಿದ್ದು, ಕನಿಷ್ಠ 6 ಜನರು ಮೃತಪಟ್ಟು, ಅಂದಾಜು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ಮೆರವಣಿಗೆ ಸಾಗುತ್ತಿದ್ದಾಗ, ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ. ಬೈಕನ್ನು ತಪ್ಪಿಸಲು ಯತ್ನಿಸಿದ ಕ್ಯಾಂಟರ್ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ಮೆರವಣಿಗೆಯ ಮೇಲೆ ಎರಗಿದ್ದಾನೆ….

Read More

‘ನಾನು ಸೂಕ್ತ ಸಮಯದಲ್ಲಿ ಉತ್ತರ ನೀಡುವೆ’: ಬಾನು ಮುಸ್ತಾಕ್

ಹಾಸನ: ಮೈಸೂರು ದಸರಾ ಉದ್ಘಾಟನೆಗೆ ತಮ್ಮ ಆಯ್ಕೆಗೆ ಸಂಬಂಧಿಸಿ ಬಿಜೆಪಿ ಮುಖಂಡರಿಂದ ವ್ಯಕ್ತವಾಗಿರುವ ವಿರೋಧಕ್ಕೆ ಸಂಬಂಧಿಸಿದಂತೆ, ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಅವರು “ಯಾರು ಏನು ಮಾತನಾಡುತ್ತಾರೋ ಮಾತನಾಡಲಿ, ನಾನು ಸೂಕ್ತ ಸಮಯದಲ್ಲಿ, ಸೂಕ್ತ ವೇದಿಕೆಯಲ್ಲಿ ಉತ್ತರ ನೀಡುವೆ” ಎಂದು ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಏನು ಮಾತನಾಡಿದ್ದೇನೆ ಎಂಬುದನ್ನು ತಿಳಿದುಕೊಂಡು ವಿರೋಧಿಸಲಿ. ಯಾರೋ ವಿರೋಧಿಸಿದ್ದಕ್ಕೆ ನಾನು ಈಗಲೇ ತೀಕ್ಷ್ಣವಾಗಿ ಪ್ರತಿಕ್ರಿಯೆ ಕೊಡಬೇಕಾಗಿಲ್ಲ. ಮಾತನಾಡುವವರದು ಅವರ ವಾಕ್ ಸ್ವಾತಂತ್ರ್ಯ….

Read More