ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೊಮ್ಮಾಯಿ ಕಚೇರಿ ಎದುರು ಪ್ರತಿಭಟನೆ ಕೇಂದ್ರ ಸರ್ಕಾರದಿಂದ ಸಾಲ ಮನ್ನಾ ಮಾಡುವಂತೆ ಒತ್ತಾಯ
ಹಾವೇರಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮತ್ತು ದಬ್ಬಾಳಿಕೆಗೆ ಬೇಸತ್ತ ನೊಂದ ಜನರು, ಅವುಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಗುರುವಾರ ಸಂಸದ ಬಸವರಾಜ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಾವೇರಿಯ ತಾಲ್ಲೂಕು ಪಂಚಾಯತ್ ಆವರಣದಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನಕಾರರು ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೀದಿಗೆ ಬಂದ ಬಡ ಮಹಿಳೆಯರುಪ್ರತಿಭಟನಕಾರರು ಮಾತನಾಡಿ, “ಜಿಲ್ಲೆಯಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ವಿಪರೀತವಾಗಿದೆ. ಬಡ ಮತ್ತು ಗ್ರಾಮೀಣ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಲಭವಾಗಿ ಸಾಲ ನೀಡಿ, ನಂತರ…

