ರಾಕೇಶ್ ನಂತರ ದವನ್: ರಾಜಕೀಯಕ್ಕೆ ಮೊಮ್ಮಗನ ತರಬೇತಿ?
ಗದಗ: ಸ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಿವಂಗತ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಮಗ ದವನ್ ರಾಕೇಶ್ ಅವರನ್ನು ಸಾರ್ವಜನಿಕ ವೇದಿಕೆಯಲ್ಲಿ ಪರಿಚಯಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ತಮ್ಮ ರಾಜಕೀಯ ಉತ್ತರಾಧಿಕಾರಿಯ ಮುನ್ಸೂಚನೆ ಇದೇನಾ ಎಂಬ ಮಾತುಗಳು ಇದೀಗ ಎಲ್ಲೆಡೆ ಕೇಳಿಬರುತ್ತಿವೆ. ಗದಗ ತಾಲೂಕು ಕುರುಬರ ಸಂಘದ ವತಿಯಿಂದ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಮಟ್ಟದ ಕನಕೋತ್ಸವ’ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮೊಮ್ಮಗ ದವನ್ ಜೊತೆ ಪಾಲ್ಗೊಂಡು…

