ರೈತ ಸಂಘದ ಹೋರಾಟಕ್ಕೆ ಸಂದ ಜಯ: ಉಡುತೊರೆ ಯೋಜನೆಗೆ 490 ಕೋಟಿ ರೂ. ಮಂಜೂರಾತಿಗೆ ಗೌಡೆ ಗೌಡ ಹರ್ಷ
ಹನೂರು: ಕರ್ನಾಟಕ ರಾಜ್ಯ ರೈತ ಸಂಘವು ಹನೂರು ತಾಲ್ಲೂಕಿನ ರೈತರ ಹಿತರಕ್ಷಣೆಗಾಗಿ ಹಮ್ಮಿಕೊಂಡಿದ್ದ ನಿರಂತರ ಹೋರಾಟ ಹಾಗೂ ಬೆಂಗಳೂರು ವಿಧಾನಸೌಧ ಚಲೋ ಪಾದಯಾತ್ರೆಗೆ ಪ್ರತಿಫಲ ದೊರೆತಿದ್ದು, ರಾಜ್ಯ ಬಜೆಟ್ನಲ್ಲಿ ಉಡುತೊರೆಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಘೋಷಿಸಿರುವುದು ರೈತ ಸಂಘದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರು. ಹನೂರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಂತ ಹಿಂದುಳಿದ ತಾಲ್ಲೂಕಾಗಿರುವ ಹನೂರಿನಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ…

