ಅಕ್ಟೋಬರ್-ನವೆಂಬರ್‌ನಲ್ಲಿ ಮಹಿಳೆಯರಿಗಾಗಿ ‘ಸಮೃದ್ಧಿ ಶಕ್ತಿ’ ಯೋಜನೆ ಜಾರಿ: ಶಾಸಕ ಸಮೃದ್ಧಿ ಮಂಜುನಾಥ

ಮಳವಳ್ಳಿ: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಸಿಕೊಂಡು ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ‘ಸಮೃದ್ಧಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ತಿಳಿಸಿದರು. ಪಟ್ಟಣದಲ್ಲಿನ ಗುರುವಾರದಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 36ನೇ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಯಾರಿಗೂ ಮೋಸ ಮಾಡಿಲ್ಲ. ಆದರೆ ಮಂಡ್ಯ ಜಿಲ್ಲೆಗೆ ಮೋಸ ಮಾಡಿದವರೇ ಹೆಚ್ಚು ಎಂಬ ಬೇಸರ ವ್ಯಕ್ತಪಡಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಸಮೃದ್ಧಿ ಸಂಸ್ಥೆ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ…

Read More

ಸವಣೂರ:ನಿಧಿ ಆಸೆಗೆ ದೇವಸ್ಥಾನ ಧ್ವಂಸ ಆರೋಪ: ನಾಲ್ವರು ಬಂಧನ, ನ್ಯಾಯಾಂಗ ವಶಕ್ಕೆ

ಹಾವೇರಿ: ನಿಧಿ ಸಿಗುವ ಆಸೆಯಿಂದ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿ ಪ್ರತಿಷ್ಠಾಪಿತವಾಗಿದ್ದ ಕಲ್ಲಿನ ದೇವಸ್ಥಾನವನ್ನು ಧ್ವಂಸಗೊಳಿಸಿ ನೆಲ ಅಗೆದ ಆರೋಪದಡಿ ನಾಲ್ವರನ್ನು ಸವಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಘಟನೆ ತಾಲೂಕಿನ ನದಿನೀರಲಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನದಿನೀರಲಗಿ ಗ್ರಾಮದ ಫಕ್ಕಿರಪ್ಪ ಮಾದರ ಅವರ ಜಮೀನಿನಲ್ಲಿರುವ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿಯ ಸಣ್ಣ ಕಲ್ಲಿನ ದೇವಸ್ಥಾನವನ್ನು ನಿಧಿ ಹುಡುಕುವ ಉದ್ದೇಶದಿಂದ ಧ್ವಂಸ ಮಾಡಲಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು…

Read More

ಮೊನ್ನೆ ಸೀಜ್, ನಿನ್ನೆ ರೀ-ಓಪನ್: ಲಕ್ಷ್ಮೇಶ್ವರ ಪುರಸಭೆ ವಾಣಿಜ್ಯ ಮಳಿಗೆಗಳ ವಿವಾದಕ್ಕೆ ಹೊಸ ತಿರುವು

ಲಕ್ಷ್ಮೇಶರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿರುವ ಮಳಿಗೆಗಳ ಅವಧಿ ಮುಗಿದಿದ್ದು, ಅವುಗಳನ್ನು ತೆರವುಗೊಳಿಸಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಹೋರಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಸುಮಾರು ಏಳು ಮಳಿಗೆಗಳನ್ನು ಸೀಜ್ ಮಾಡಿದ್ದರು. ಆದರೆ ಬುಧವಾರ ಅದೇ ಮಳಿಗೆಗಳನ್ನು ಮತ್ತೆ ತೆರೆಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ವ್ಯಾಪಾರಸ್ಥರು ಮಳಿಗೆಗಳ ತೆರವು ಕ್ರಮವನ್ನು ಪ್ರಶ್ನಿಸಿ…

Read More

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ

ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಹಾಗೂ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ…

Read More

ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹನೂರು ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಅವರು ಮಾತನಾಡಿ, ಪರಿಸರವು ಮಾನವಕುಲಕ್ಕೆ ದೊರೆತಿರುವ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ…

Read More

​ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ

ಮಳವಳ್ಳಿ: ಪಟ್ಟಣದ ನ್ಯೂ ರೇಬೋ ಕಿಡ್ಸ್ ಸಂಸ್ಥೆಯ ವತಿಯಿಂದ ಪುಟಾಣಿ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ವಿದ್ಯಾ ಅವರು ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ವಿದ್ಯಾ ಅವರು, ಪ್ರಸ್ತುತ ದಿನಗಳಲ್ಲಿ ಪ್ಲಾಸ್ಟಿಕ್ ಅತಿಯಾದ ಬಳಕೆಯಿಂದಾಗಿ ಪರಿಸರ ಸಂಪೂರ್ಣವಾಗಿ ಹಾಳಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕಾಗಿದೆ. ಕೇವಲ ಭಾಷಣಕ್ಕೆ ಸೀಮಿತವಾಗದೆ, ಎಲ್ಲಾ ಖಾಲಿ ಜಾಗಗಳಲ್ಲೂ ಗಿಡಗಳನ್ನು ನೆಟ್ಟು, ಅವುಗಳಿಗೆ ನಿಯಮಿತವಾಗಿ ನೀರು…

Read More

ಶಿಕ್ಷಕರ ಕೊರತೆ: ರಾಣೇಬೆನ್ನೂರ ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಶಾಲೆ ಬಂದ್ ಮಾಡಿ ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು, ಪಾಲಕರು, ಪೋಷಕರು, ಶಾಲಾ ಮಕ್ಕಳು ಹಾಗೂ ಎಸ್‌ಡಿಎಂಸಿ ಸದಸ್ಯರು ಬುಧವಾರದಂದು ಶಾಲೆ ಬಂದ್ ಮಾಡಿ ಸುಮಾರು ನಾಲ್ಕು ಗಂಟೆಗಳ ಕಾಲ ತೀವ್ರ ಪ್ರತಿಭಟನೆ ನಡೆಸಿದರು. ಒಂದರಿಂದ ಎಂಟನೇ ತರಗತಿವರೆಗೆ ಒಟ್ಟು 111 ಮಕ್ಕಳು ಕಲಿಯುತ್ತಿದ್ದು, ದೀರ್ಘಕಾಲದಿಂದ ಕಾಡುತ್ತಿರುವ ಶಿಕ್ಷಕರ ಕೊರತೆಯಿಂದಾಗಿ ಪಾಠ ಬೋಧನೆ ಸಮರ್ಪಕವಾಗಿ ನಡೆಯುತ್ತಿಲ್ಲ. ಇದು ಮಕ್ಕಳ ಭವಿಷ್ಯದ…

Read More

ದಾವಣಗೆರೆ ಉಪಚುನಾವಣೆ: ಸಚಿವ ಜಮೀರ್ ಹೆಸರಿನ ಆಡಿಯೋ ವೈರಲ್; ಷಡ್ಯಂತ್ರ ಎಂದ ಸಿರಾಜ್

ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಚ್ಚಾಟಿತ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆಯ ಮತದಾನದ ದಿನವಾದ ಏಪ್ರಿಲ್ 9ರಂದು ಇಬ್ಬರ ನಡುವೆ ನಡೆದಿದೆ ಎನ್ನಲಾದ ಸುಮಾರು 3 ನಿಮಿಷ 50 ಸೆಕೆಂಡ್‌ಗಳ ಈ ಮಾತುಕತೆಯನ್ನು ‘ಕನ್ನಡ ಕಾಕ್ರೋಚ್’ ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸೋಮವಾರ ಮುಂಜಾನೆ…

Read More

​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ

ಮಳವಳ್ಳಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಬೋರ್‌ವೆಲ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಕೊರತೆ…

Read More

ಭೀಮಾತೀರದಲ್ಲಿ ಮತ್ತೆ ನೆತ್ತರ ಹದ: ಜಮೀನು ವಿವಾದಕ್ಕೆ ಸಂಧಾನ ಸಭೆಯಲ್ಲೇ ಆರು ಜನರ ಭೀಕರ ಹತ್ಯೆ

ವಿಜಯಪುರ: ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಕ್ತಪಾತವಾಗಿದ್ದು, ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವಿನ ಜಮೀನು ವ್ಯಾಜ್ಯವೇ ಈ ನರಮೇಧಕ್ಕೆ ಕಾರಣ ಎಂದು ತಿಳಿದುಬಂದಿದೆ. ದಾಳಿಯ ತೀವ್ರತೆಗೆ ನಿರಾಳೆ ಕುಟುಂಬದ ಪ್ರಮುಖರು ಹಾಗೂ ಅವರ ಬೆಂಬಲಿಗರು ಸೇರಿ ಒಟ್ಟು ಆರು ಮಂದಿ ಸ್ಥಳದಲ್ಲೇ ಪ್ರಾಣ…

Read More