ನೆಲಮಂಗಲ:ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ

ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ ನೆಲಮಂಗಲ: ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಸರ್ಕಾರಿ ಕೆಲಸ ನೀಡಿದ್ದರೆ, ಅದನ್ನು ಗಾಳಿಗೆ ತೂರಿ ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಸಿಬ್ಬಂದಿಗಳು ಮಧ್ಯಾಹ್ನದ ವೇಳೆಯಲ್ಲೇ ಕುಡಿದು ಎಂಜಾಯ್ ಮಾಡುತ್ತಿರುವ ಕೃತ್ಯ ನೆಲಮಂಗಲ ತಾಲೂಕಿನಲ್ಲಿ ಇಂದು ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗಳ ಈ ಬೇಜವಾಬ್ದಾರಿ ಹಾಗೂ ದರ್ಬಾರ್‌ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಖಂಡನೆ…

Read More

ಬಡ್ಡಿ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ: ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಾಣಿಸಿಕೊಂಡ ಆಟೋ ಚಾಲಕನ ಸಂಸಾರ

ಕೋಲಾರ: ಸಾಲದ ಹೊರೆ ಹಾಗೂ ಬಡ್ಡಿದಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಒಂದೇ ತಿಂಗಳ ಅವಧಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮನೆ ಕಟ್ಟುವ ಕನಸಿನಿಂದ ಸಾಲ ಮಾಡಿಕೊಂಡಿದ್ದ ಕುಟುಂಬ ಕೊನೆಗೆ ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಂಡಿರುವುದು ಜಿಲ್ಲೆಯಾದ್ಯಂತ ಮರುಕ ಮೂಡಿಸಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಆಟೋ ಚಾಲಕ ಸುರೇಶ್ ಹಾಗೂ ಅವರ ಪತ್ನಿ ಪ್ರಮೀಳಾ ದಂಪತಿಗೆ ಇಬ್ಬರು ಮಕ್ಕಳಿದ್ದರು. ಕಷ್ಟಪಟ್ಟು ದುಡಿದು ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಾ…

Read More

‘ಟೀಮ್ ಕರ್ನಾಟಕ’ವಾಗಿ ಜನರ ಸೇವೆ; ಪ್ರತಿ ವಿಧಾನಸಭೆಯಲ್ಲಿ ಜನತಾ ದರ್ಬಾರ್, ಬರ ನಿರ್ವಹಣೆಗೆ ಆದ್ಯತೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಚಿತ್ರದುರ್ಗ: ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಎಲ್ಲರೂ ‘ಟೀಮ್ ಕರ್ನಾಟಕ’ ಮನೋಭಾವದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಚಿತ್ರದುರ್ಗದಲ್ಲಿ ನಡೆದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಮಧ್ಯೆ ಸರ್ಕಾರ ಇರುವಂತೆ ನೋಡಿಕೊಳ್ಳಲು ‘ಪ್ರಜಾಸೇವಾ ಇಲಾಖೆ’ ಸ್ಥಾಪಿಸಲಾಗುತ್ತಿದ್ದು, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನರ…

Read More

ಹನೂರು:ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿ ಮುನಿರಾಜು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್…

Read More

ಹುಣಸೂರಿನಲ್ಲಿ ಭೀಕರ ಕೌಟುಂಬಿಕ ದುರಂತ: ಹೆಂಡತಿ, ಮಕ್ಕಳಿಗೆ ಪ್ಲಾಸ್ಟರ್ ಸುತ್ತಿ ಕೊಲೆ ಮಾಡಿ ವ್ಯಕ್ತಿ ಆತ್ಮಹತ್ಯೆ!

ವಿಶೇಷ ಕ್ರೈಂ ವರದಿ ಹುಣಸೂರು / ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ನಗರದ ಮಾರುತಿ ಬಡಾವಣೆಯಲ್ಲಿ ಸಮಾಜವೇ ತಲೆತಗ್ಗಿಸುವಂತಹ, ಕರುಳು ಹಿಂಡುವ ದಾರುಣ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತಾಶೆಗೊಂಡ ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮುಗ್ಧ ಮಕ್ಕಳನ್ನು ಅತ್ಯಂತ ನೃಶಂಸವಾಗಿ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬದ ಯಜಮಾನ ಹರೀಶ್, ಆತನ ಪತ್ನಿ ನಿಶ್ಚಿತಾ ಹಾಗೂ ಇವರ ಮುಗ್ಧ ಮಕ್ಕಳಾದ ನೆಕ್ಸಾ ಮತ್ತು ರಕ್ಷಾ…

Read More

ಮಳೆಯೂ ಕೈಕೊಟ್ಟಿತು, ಸರ್ಕಾರವೂ ಕೈಬಿಟ್ಟಿತು?: ಬಾಗಲಕೋಟೆಯ ಲಿಂಗಾಪುರ ಗ್ರಾಮ ಖಾಲಿ ಅಧಿಕಾರಿಗಳೇ – ಜನಪ್ರತಿನಿಧಿಗಳೇ, ಇತ್ತ ಕಣ್ಣು ಹಾಯಿಸಿ!

ಪಬ್ಲಿಕ ಸಮಾಚಾರ ವಿಶೇಷ ವರದಿ ಗುಳೇದಗುಡ್ಡ / ಬಾಗಲಕೋಟೆ: ಒಂದೆಡೆ ಕಣ್ಣೀರಾಗಿಸುವ ಭೀಕರ ಬರ, ಇನ್ನೊಂದೆಡೆ ಆಡಳಿತಾರೂಢ ಸರ್ಕಾರ ಮತ್ತು ಜನಪ್ರತಿನಿಧಿಗಳ ಭೀಕರ ನಿಷ್ಕ್ರಿಯತೆ! ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಇಂದು ಭೀಕರ ಬರದ ದವಡೆಗೆ ಸಿಲುಕಿ ಬಿಕೋ ಎನ್ನುತ್ತಿದೆ. ಊರಿಗೆ ಊರೇ ಖಾಲಿಯಾಗುತ್ತಿದ್ದರೂ, ಶಾಸಕರು, ಸಂಸದರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ನಿದ್ರೆಯಲ್ಲಿದ್ದಾರೆ ಯೇ ಎಂಬ ಸಾರ್ವಜನಿಕ ಆಕ್ರೋಶ ಮುಗಿಲುಮುಟ್ಟಿದೆ. ಬೀಗ ಬಿದ್ದ ಮನೆಗಳು, ವೃದ್ಧರ ನಿಟ್ಟುಸಿರು: ಸುಮಾರು 300ಕ್ಕೂ ಹೆಚ್ಚು ಮನೆಗಳು, 2,000ದಷ್ಟು…

Read More

ದೊಡ್ಡಿಂದುವಾಡಿ ಶಾಲೆಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ: ಪರಿಸರ ಕಾಳಜಿ, ಸ್ಮಾರ್ಟ್ ಕ್ಲಾಸ್ ಹಾಗೂ ಕೈತೋಟಕ್ಕೆ ಮೆಚ್ಚುಗೆ

ಹನೂರು: ಹನೂರು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸಿ.ಎಸ್.ಆರ್. ಅನುದಾನದಡಿ ಮೇಲ್ದರ್ಜೆಗೆ ಏರುತ್ತಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಶ್ರೀಮತಿ ಶ್ರೀರೂಪಾ ಅವರು ಶನಿವಾರ ಭೇಟಿ ನೀಡಿ, ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಶಾಲೆಗೆ ಅಗತ್ಯವಿರುವ ಇನ್ನಿತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಗಳು, ಅಡುಗೆಮನೆ ಹಾಗೂ ಬಿಸಿ ಊಟ ಯೋಜನೆಗಾಗಿ ಶಾಲಾ ಮಕ್ಕಳೇ ಬೆಳೆಸಿರುವ ಕೈತೋಟವನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಪರಿಸರ ಸಂರಕ್ಷಣೆ…

Read More

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ, ಅಧಿಕಾರಿಗಳಿಗೆ ತ್ವರಿತ ಕ್ರಮದ ಸೂಚನೆ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಜಿಲ್ಲಾಧಿಕಾರಿಗಳು ಹನೂರು ತಾಲ್ಲೂಕಿನ ಮಾರಟಹಳ್ಳಿ ಹಾಗೂ ಚಂಗಡಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸ್ಥಳದಲ್ಲೇ ಪರಿಶೀಲನೆ ನಡೆಸಿದರು. ಮಾರಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಕಾರ್ಯಪಾಲಕ ಇಂಜಿನಿಯರ್‌, ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ…

Read More

ಹನೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಕಾರ್ಯಕ್ರಮ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗುತ್ತಿರುವುದು ಸಮಾಜಕ್ಕೆ ದೊಡ್ಡ ಅಪಾಯವಾಗಿದ್ದು, ಇದು ಸಮಾಜಘಾತುಕ ಶಕ್ತಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೊಲೀಸ್ ವೃತ್ತ ನಿರೀಕ್ಷಕ ಆನಂದಮೂರ್ತಿ ಹೇಳಿದರು. ಹನೂರು ಪೊಲೀಸ್ ಠಾಣೆಯ ವತಿಯಿಂದ ತಾಲೂಕಿನ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ,…

Read More

ಹನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ಮುಖಂಡರ ಆಗ್ರಹ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ನಿರಂತರ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹನೂರು ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹನೂರು ಮಂಡಲ ಘಟಕ ಆಗ್ರಹಿಸಿದೆ. ಮಂಡಲ ಅಧ್ಯಕ್ಷ ಕಣ್ಣೂರು ವೃಷಭೇಂದ್ರ ಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಹಶೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಮಂಡಲ ಅಧ್ಯಕ್ಷ ವೃಷಭೇಂದ್ರ ಸ್ವಾಮಿ, ಚಾಮರಾಜನಗರ ಜಿಲ್ಲೆಯ…

Read More