ಧರ್ಮಸ್ಥಳ ಪ್ರಕರಣದ ಹಿಂದೆ ರಾಜಕೀಯ ಷಡ್ಯಂತ್ರ: ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರೊಟ್ಟಿಗೆ ಮೋದಿ ಸರ್ಕಾರ ಇರುತ್ತೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಬೆಳ್ತಂಗಡಿ: ದೇಶದಲ್ಲಿ ಬಹುಸಂಖ್ಯಾತರ ವಿರುದ್ಧ ಸದಾ ಕಾಲ ಷಡ್ಯಂತ್ರ ನಡೆಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ, ಧರ್ಮಸ್ಥಳ ಪ್ರಕರಣವನ್ನು ಅದಕ್ಕಾಗಿಯೇ ಬಳಸಿಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಮೋದಿ ಸರ್ಕಾರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.‘ಧರ್ಮಸ್ಥಳ ಚಲೋ’ ಹಾಗೂ ‘ಸಮಾಜ ಜಾಗೃತಿ’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಕೇವಲ ಒಂದು ವರ್ಗದವರು ಬರುವುದಿಲ್ಲ. ಎಲ್ಲಾ ವರ್ಗದವರೂ, ಅದರಲ್ಲೂ ವಿಶೇಷವಾಗಿ ಹಿಂದುಳಿದ ವರ್ಗದವರು,…

