ಪ್ರವಾಹಕ್ಕೆ ಸಿಲುಕಿ ಅನ್ನದಾತ ಅತಂತ್ರ: ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಕಣ್ಣಿಲ್ಲವೇ?
ಚಿತ್ತಾಪುರ (ವಾಡಿ): ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೀಮಾ ಮತ್ತು ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿದ್ದು, ಚಿತ್ತಾಪುರ ತಾಲ್ಲೂಕಿನ ಅಲಕರಟಿ ಹಾಗೂ ಬೆಳವಡಗಿ ಗ್ರಾಮಗಳು ಜಲಾವೃತಗೊಂಡಿವೆ. ನೂರಾರು ಕ್ವಿಂಟಾಲ್ನಷ್ಟು ಹೆಸರು ಬೆಳೆ ಸಂಪೂರ್ಣವಾಗಿ ನೀರುಪಾಲಾಗಿದೆ. ಆದರೆ, ಇಷ್ಟೆಲ್ಲಾ ದೊಡ್ಡ ದುರಂತ ಸಂಭವಿಸಿದ್ದರೂ, ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಅಧಿಕ ಪ್ರಮಾಣದ ನೀರು ಬಿಡುಗಡೆಯಾಗಿರುವುದರಿಂದ ನದಿಗಳು ಅಪಾಯದ ಮಟ್ಟ ಮೀರಿ…

