ಮಾಜಿ ಸಚಿವ ಗೋವಿಂದೇಗೌಡರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕಳ್ಳತನ; ನೇಪಾಳಿ ದಂಪತಿ ನಾಪತ್ತೆ
ಚಿಕ್ಕಮಗಳೂರು: ‘ಮಲೆನಾಡಿನ ಗಾಂಧಿ’ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವ ದಿವಂಗತ ಎಚ್.ಜಿ. ಗೋವಿಂದೇಗೌಡರ ಕುಟುಂಬದ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ ದಂಪತಿ, ₹7 ಲಕ್ಷ ನಗದು ಮತ್ತು ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.ಗೋವಿಂದೇಗೌಡರ ಪುತ್ರ ವೆಂಕಟೇಶ್ ಅವರು ನೀಡಿದ ದೂರಿನ ಪ್ರಕಾರ, ಕಳ್ಳತನವು ಕೊಪ್ಪ ತಾಲ್ಲೂಕಿನ ಮಣಿಪುರ ಎಸ್ಟೇಟ್ನಲ್ಲಿ ನಡೆದಿದೆ. ಕೇವಲ 15 ದಿನಗಳ ಹಿಂದೆ ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ…

