ಕಂಪ್ಲಿ: ಸ್ಮಶಾನ ರಸ್ತೆ ಜಲಾವೃತ, ಶವ ಹೊತ್ತೊಯ್ಯಲು ಹರಸಾಹಸ – ಸ್ಮಶಾನಕ್ಕೆ ದಾರಿ ಯಾವುದಯ್ಯಾ?
ಬಳ್ಳಾರಿ: ಕಂಪ್ಲಿ ತುಂಗಭದ್ರಾ ಜಲಾಶಯ ತುಂಬಿ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ, ಕಂಪ್ಲಿ-ಕೋಟೆ ಸಮೀಪದ ನದಿ ತೀರದಲ್ಲಿರುವ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದಾಗಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಹರಗೋಲುಗಳಲ್ಲಿ ಶವಗಳನ್ನು ಹೊತ್ತು, ಪ್ರವಾಹದ ನೀರಿನಲ್ಲೇ ಹರಸಾಹಸ ಮಾಡುವ ದಾರುಣ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಪ್ರತಿ ವರ್ಷ ಜಲಾಶಯ ಭರ್ತಿಯಾಗಿ ಪ್ರವಾಹ ಬಂದಾಗಲೆಲ್ಲಾ ಈ ಸ್ಮಶಾನ ರಸ್ತೆ ಮುಳುಗುವುದು ಸಾಮಾನ್ಯವಾಗಿದೆ. ಆದರೂ, ದಶಕಗಳಿಂದಲೂ ಈ…

