ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯ 8 ರೌಡಿಗಳ ಗಡಿಪಾರು: ಎಸ್ಪಿ ಲಕ್ಷ್ಮಣ ನಿಂಬರಗಿ
ವಿಜಯಪುರ: ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 8 ರೌಡಿಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1,212 ರೌಡಿಶೀಟರ್ಗಳಿದ್ದು, ಇದರಲ್ಲಿ ಪ್ರಮುಖ 27 ರೌಡಿಗಳನ್ನು ಗಡಿಪಾರು ಮಾಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ವಿಚಾರಣೆ ನಡೆದು, ಎಂಟು ಜನರ ಗಡಿಪಾರಿಗೆ ಆದೇಶ ನೀಡಲಾಗಿದೆ. ಉಳಿದ 19 ಜನರ ಗಡಿಪಾರಿಗೂ ಕ್ರಮ…

