ಉಕ್ಕುಂದ ಗ್ರಾಮದಲ್ಲಿ ಫೆಬ್ರವರಿ 24 ರಿಂದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ರಾಣೇಬೆನ್ನೂರು: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ ಫೆಬ್ರವರಿ 27 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 24 ರಂದು ಬೆಳಿಗ್ಗೆ 6 ಗಂಟೆಗೆ ನಂದಿಧ್ವಜ ಸ್ಥಾಪನೆ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ನೂತನ ಪುಷ್ಪ ರಥೋತ್ಸವದ ನಿಮಿತ್ತ…

