ಉಕ್ಕುಂದ ಗ್ರಾಮದಲ್ಲಿ ಫೆಬ್ರವರಿ 24 ರಿಂದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ರಾಣೇಬೆನ್ನೂರು: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ ಫೆಬ್ರವರಿ 27 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ​ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 24 ರಂದು ಬೆಳಿಗ್ಗೆ 6 ಗಂಟೆಗೆ ನಂದಿಧ್ವಜ ಸ್ಥಾಪನೆ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ನೂತನ ಪುಷ್ಪ ರಥೋತ್ಸವದ ನಿಮಿತ್ತ…

Read More

ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ

ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ., ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

Read More

ಲಂಚ ಸ್ವೀಕಾರ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ

ಗದಗ: ಗುತ್ತಿಗೆದಾರರೊಬ್ಬರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಾಸಕರ ಒಡೆತನದ ಆಸ್ಪತ್ರೆಯಲ್ಲೇ ಈ ಲಂಚದ ವಹಿವಾಟು ನಡೆಯುತ್ತಿದ್ದಾಗ ದಾಳಿ ನಡೆಸಿರುವ ಪೊಲೀಸರು, ಐದು ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಸಂಕದಾಳ ಗ್ರಾಮದಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಶಾಸಕರು ಗುತ್ತಿಗೆದಾರ…

Read More

ಏಕಾಏಕಿ ಶಿಕ್ಷಕನ ವಜಾ: ಕುಮಾರಪಟ್ಟಣದ ಆದಿತ್ಯ ಸ್ಕೂಲ್ ಎದುರು ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಕುಮಾರಪಟ್ಟಣದ ಆದಿತ್ಯ ಸ್ಕೂಲ್‌ನಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕ ಹಾಗೂ ಕಚೇರಿ ಆಡಳಿತಾಧಿಕಾರಿ ಶಶಿಧರ ಶಿಗ್ಲಿ ಅವರನ್ನು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ​ಸಂಬಳ ಹೆಚ್ಚಳ ಕೇಳಿದ್ದಕ್ಕೆ ವಜಾ ಆರೋಪ: ಪ್ರತಿಭಟನೆಯಲ್ಲಿ ಮಾತನಾಡಿದ ಶಿಕ್ಷಕ ಶಶಿಧರ ಶಿಗ್ಲಿ, “ನಾನು 1997ರಿಂದ ಈ ಸಂಸ್ಥೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇನೆ. 28 ವರ್ಷಗಳ ಸೇವೆಯ ನಂತರವೂ ಸಂಸ್ಥೆಯು ನನಗೆ ಕೇವಲ…

Read More

ಹಾವೇರಿಯಲ್ಲಿ ‘ಹಂಚು’ ಸರಿಸಿದ ಕಿಲಾಡಿ ಕಳ್ಳರು: 15 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ,

ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ಅತಿಮಾನುಷ ರೀತಿಯಲ್ಲಿ ಮನೆಯೊಳಗೆ ನುಗ್ಗಿರುವ ಕಳ್ಳರು ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಮನೆಗೆ ಹಾಕಿರುವ ದುಬಾರಿ ಬೀಗಗಳು ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ನಾಗರಿಕರು ಹೆಮ್ಮೆಪಡುವ ಕಾಲದಲ್ಲಿ, ಕಳ್ಳರು ಈ ಬಾರಿ ಆರಿಸಿಕೊಂಡಿದ್ದು ಮನೆಯ ಅತ್ಯಂತ ದುರ್ಬಲ ಭಾಗವಾದ ‘ಮೇಲ್ಛಾವಣಿ’ಯನ್ನು! ​ಅಡುಗೆ ಮನೆಯೇ ಕಳ್ಳರ ರಹದಾರಿ! ​ಹಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಗೌಸ್ ಎಂಬುವವರ ಮನೆಯಲ್ಲಿ ಈ ಸಿನೆಮಾ…

Read More

​ಬೀದರ್: ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಭಾಲ್ಕಿ: ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಗಳಾದ ವಿಶ್ವನಾಥ (50) ಹಾಗೂ ಅವರ ಪುತ್ರ ಅಮರೇಶ (23) ಮೃತಪಟ್ಟ ದುರ್ದೈವಿಗಳು. ​ಕಾರಂಜಾ ಜಲಾಶಯದ ಕಾಲುವೆ ಪಕ್ಕದಲ್ಲಿ ಸಂಚರಿಸುತ್ತಿದ್ದಾಗ ಈ ಆಕಸ್ಮಿಕ ನಡೆದಿದೆ ಎಂದು ತಿಳಿದುಬಂದಿದೆ. ಕಾಲುವೆಗೆ ಬಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ…

Read More

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ: ಕೊಪ್ಪಳದ ಮೂವರು ಕಾಮುಕರಿಗೆ ಮರಣದಂಡನೆ ಶಿಕ್ಷೆ

​ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಒಡತಿಯ ಮೇಲಿನ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಮೂವರು ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗಂಗಾವತಿಯ ಸಾಯಿನಗರದ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಅಲಿಯಾಸ್ ಚೈತನ್ಯಸಾಯಿ ಹಾಗೂ ಶರಣಪ್ಪ ಅಲಿಯಾಸ್ ಶರಣು…

Read More

​ರಂಗೋಲಿ ಚಿತ್ತಾರದಲ್ಲಿ ಅರಳಿದ ಈಶ್ವರ:

ರಾಣೇಬೆನ್ನೂರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಗರದ ಕುರುಬಗೇರಿಯ ನಿವಾಸಿ ಸರೋಜ ಕೊಪ್ಪದ ಅವರು ತಮ್ಮ ಮನೆಯಂಗಳದಲ್ಲಿ ರಂಗೋಲಿಯ ಮೂಲಕ ಶಿವಲಿಂಗದ ಅದ್ಭುತ ಚಿತ್ರಣವನ್ನು ಬಿಡಿಸಿದ್ದಾರೆ. ಭಕ್ತಿ ಮತ್ತು ಕಲೆಯ ಅಪರೂಪದ ಸಂಗಮದಂತಿದ್ದ ಈ ರಂಗೋಲಿ ಚಿತ್ತಾರವು ನೋಡುಗರ ಗಮನ ಸೆಳೆಯಿತು.

Read More

​ಮಂಡ್ಯದಲ್ಲಿ ಭೀಕರ ಕೆಮಿಕಲ್ ಟ್ಯಾಂಕ್ ಸ್ಫೋಟ: ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವು. ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಜಿಲ್ಲೆಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪವಿರುವ ‘ಕೀರ್ತಿ ಕೆಮಿಕಲ್ ಕಾರ್ಖಾನೆ’ಯಲ್ಲಿ ಭಾನುವಾರ ರಾಸಾಯನಿಕ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಭೀಕರವಾಗಿ ಮೃತಪಟ್ಟಿದ್ದಾರೆ. ಕಾರ್ಖಾನೆಯ ಸಾಮಗ್ರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ​ಛಿದ್ರಗೊಂಡ ದೇಹಗಳು: ​ಬಿಹಾರ ಮೂಲದ ಕಲೂಪ್‌ಖಾನ್ (27) ಮತ್ತು ಅಶೋಕ್ (26) ಮೃತಪಟ್ಟ ದುರ್ದೈವಿಗಳು. ಟ್ಯಾಂಕ್ ಸ್ಫೋಟಗೊಂಡ ರಭಸಕ್ಕೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡು ನೂರಾರು ಅಡಿ ದೂರಕ್ಕೆ ಎಸೆಯಲ್ಪಟ್ಟಿವೆ. ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್ ಹಾಗೂ ರಾಜೀವ್‌ಕುಮಾರ್…

Read More

​ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸೀಟು ನಿಶ್ಚಿತ; ಬರೆದಿಟ್ಟುಕೊಳ್ಳಿ: ಹಾವೇರಿಯಲ್ಲಿ ಡಿ.ಕೆ. ಶಿವಕುಮಾರ್ ವಿಶ್ವಾಸ

ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಜನಮನ ಗೆದ್ದಿವೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 141 ಸೀಟುಗಳನ್ನು ಗೆಲ್ಲುವುದು ಖಚಿತ. ನನ್ನ ಈ ಮಾತನ್ನು ಎಲ್ಲರೂ ಬರೆದಿಟ್ಟುಕೊಳ್ಳಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯ ನುಡಿದರು. ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ​ಸಂಖ್ಯಾಬಲದ ಮೇಲೆ ಅಚಲ ವಿಶ್ವಾಸ: ಹಾವೇರಿ ಜಿಲ್ಲೆಯ ಜನರು ಆರು ಮಂದಿ…

Read More