ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ: ಜೆಎಂಸಿ ಸರ್ವೆ ವೇಳೆ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ, ಬೈರಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ, ಜು.13: ಉದ್ದೇಶಿತ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ವಿರೋಧವಾಗಿ ರಾಮನಗರ ಜಿಲ್ಲೆಯ ಬೈರಮಂಗಲದಲ್ಲಿ ರೈತರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಂಟಿ ಅಳತೆ (ಜೆಎಂಸಿ) ಸರ್ವೆ ನಡೆಸಲು ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರೂರು ಹಾಗೂ ಭಾರಂಗಿ ವ್ಯಾಪ್ತಿಯ ರೈತರು ಬೈರಮಂಗಲ ಸರ್ಕಲ್‌ನಲ್ಲಿ ‘ಪೊರಕೆ…

Read More

11 ಲಕ್ಷ ಲಂಚ ಪ್ರಕರಣ: ಅಫಜಲಪುರ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

ಕಲಬುರಗಿ: ಏಳು ವರ್ಷಗಳ ಹಿಂದೆ ಇಡೀ ರಾಜ್ಯದ ಗಮನ ಸೆಳೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು…

Read More

ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: ಧಾರವಾಡ ಮೂಲದ 6 ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

ಪರಿಶುದ್ಧ, ಜನಪರ ಮತ್ತು ಸಮಾನತೆಯ ಆಡಳಿತವೇ ಸರ್ಕಾರದ ಗುರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಕಲಬುರಗಿ: ಪರಿಶುದ್ಧ, ಜನಪರ ಹಾಗೂ ಸಮಾನತೆಯ ಆಡಳಿತದ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೇವೆ ಮತ್ತು ನಾಗರಿಕ ಹಕ್ಕುಗಳನ್ನು ತಲುಪಿಸುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಕಲಬುರಗಿಯಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ…

Read More

ಚಿರತೆ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ; ಕುಟುಂಬಕ್ಕೆ ಸಾಂತ್ವನ

ಹನೂರು: ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಅವರ ಕುಟುಂಬವನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ ದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮನೆಯ ಮುಂಭಾಗ ಅಜ್ಜಿ ಶಿವಮ್ಮ ಹಾಗೂ ಮೊಮ್ಮಗಳು ಹರ್ಷಿತಾ ಕುಳಿತಿದ್ದಾಗ ಏಕಾಏಕಿ…

Read More

ತೂಗು ಸೇತುವೆ ಮನುಷ್ಯ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಯ ರೂವಾರಿ ಇನ್ನಿಲ್ಲ

ದಕ್ಷಿಣ ಕನ್ನಡ: ದೇಶಾದ್ಯಂತ ‘ಭಾರತದ ಸೇತುವೆ ಮನುಷ್ಯ’ (Bridge Man of India) ಹಾಗೂ ತೂಗು ಸೇತುವೆಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳ ಹಿಂದೆ ಉತ್ತರಾಖಂಡದ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಪತ್ನಿ ಉಷಾ ಅವರನ್ನು…

Read More

ಅಕ್ರಮ ಸಂಬಂಧದ ದುರಂತ ಅಂತ್ಯ: ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹ ಸುಟ್ಟ ಆರೋಪ; ತನಿಖೆ ಭೀತಿಗೆ ಆರೋಪಿ ಆತ್ಮಹತ್ಯೆ

ಮಂಡ್ಯ: ಅಕ್ರಮ ಸಂಬಂಧದ ಹಿನ್ನೆಲೆ ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿದ್ದು, ಬಳಿಕ…

Read More

ಚಿಂತಾಮಣಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಸು.ಶಿ. ಶಾಂತಕುಮಾರ್ ಹರವೆ ಆಯ್ಕೆ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚಿಂತಾಮಣಿ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11, 2026ರಂದು ಚಿಂತಾಮಣಿಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಹಾಗೂ ಸಾಹಿತಿ ಸು.ಶಿ. ಶಾಂತಕುಮಾರ್ ಹರವೆ ಅವರು ಆಯ್ಕೆಯಾಗಿದ್ದಾರೆ. ಈ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದು, ಮೈಸೂರಿನ ಪ್ರತಿನಿಧಿಯಾಗಿ ಸು.ಶಿ. ಶಾಂತಕುಮಾರ್ ಹರವೆ ಅವರು ಭಾಗವಹಿಸಿ ತಮ್ಮ ಕವನವನ್ನು…

Read More