ಸಹಸ್ರ ದಿನಗಳ ಸಂಭ್ರಮ: ಹಾವೇರಿಯಲ್ಲಿ ಹಕ್ಕುಪತ್ರ ವಿತರಣೆಯೊಂದಿಗೆ ಸರ್ಕಾರದ ‘ಸಾಧನಾ ಸಮಾವೇಶ’ಕ್ಕೆ ಸಿಎಂ ಚಾಲನೆ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಒಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಾವೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ‘ಸಾಧನಾ ಸಮಾವೇಶ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳೇ ನಮ್ಮ ಬದ್ಧತೆಗೆ ಸಾಕ್ಷಿ ಎಂದು ಸಾರಿದರು. ​ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ದಾಖಲೆ: ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಕಂದಾಯ…

Read More

​ಸೂರಗೊಂಡನಕೊಪ್ಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬರುತ್ತಿದಂತೆ ಕಪ್ಪುಬಟ್ಟೆ ಪ್ರದರ್ಶನ: ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಆಕ್ರೋಶ

​ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಪವಿತ್ರ ಕ್ಷೇತ್ರ ಭಾಯಾಗಡ್‌ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವದ ವೇದಿಕೆಯು ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನಾ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಯುವಕರು ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. ​ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿ ನೀತಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಡಿಸಿಎಂ ವೇದಿಕೆಗೆ…

Read More

​ಹಾವೇರಿ: ಇಂದು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹಬ್ಬ; 1.23 ಲಕ್ಷ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯರಿಂದ ಹಕ್ಕುಪತ್ರ ವಿತರಣೆ

ಹಾವೇರಿ: ರಾಜ್ಯ ಸರ್ಕಾರದ ಒಂದು ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯನ ಗುಡಿ ಸಮೀಪ ಇಂದು ಬೃಹತ್‌ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಆಯೋಜಿಸಲಾಗಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾವೇರಿ ಸೇರಿದಂತೆ ಒಟ್ಟು 9 ಜಿಲ್ಲೆಗಳ 1.23 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಕಂದಾಯ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಹಲವು ದಶಕಗಳಿಂದ ದಾಖಲೆ ರಹಿತವಾಗಿ ಪಾಡಿ, ಹಟ್ಟಿ ಹಾಗೂ ತಾಂಡಾಗಳಲ್ಲಿ ವಾಸಿಸುತ್ತಿದ್ದ ನಿವಾಸಿಗಳಿಗೆ ಒಡೆತನ…

Read More

ಹಾವೇರಿ: ನಾಳೆ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹಬ್ಬ; ಸಾವಿರಾರು ಫಲಾನುಭವಿಗಳಿಗೆ ಭೂಮಿಯ ಹಕ್ಕು ನೀಡಲಿರುವ ಸಿಎಂ ಸಿದ್ದರಾಮಯ್ಯ

ಹಾವೇರಿ: ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಜನಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಹಾವೇರಿ ನಗರದ ಹೊರವಲಯವು ನವವಧುವಿನಂತೆ ಸಜ್ಜಾಗಿದೆ. ದಶಕಗಳಿಂದ ಭೂಮಿಯ ಹಕ್ಕು ಮತ್ತು ಸಾಗುವಳಿ ಚೀಟಿಗಾಗಿ ಕಾಯುತ್ತಿದ್ದ ಬಡವರ ಹಾಗೂ ರೈತರ ಕನಸು ನಾಳೆ ನನಸಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಜಿಲ್ಲೆಯ ಸಾವಿರಾರು ಫಲಾನುಭವಿಗಳಿಗೆ ನೇರವಾಗಿ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಸರ್ಕಾರದ ಆಶಯದಂತೆ ಪ್ರತಿಯೊಬ್ಬ ಅರ್ಹ ಭೂಹೀನನಿಗೂ ಭೂಮಿಯ ಒಡೆತನ ನೀಡುವ ಉದ್ದೇಶದೊಂದಿಗೆ ಆಯೋಜಿಸಲಾಗಿರುವ ಈ…

Read More

ಹಾವೇರಿ ಸಮಾವೇಶಕ್ಕೆ ಬಸ್ ನಿಯೋಜನೆ: ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ರೈತ ಸಂಘದ ಆತಂಕ

​ರಾಣೇಬೆನ್ನೂರು: ಹಾವೇರಿಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿರುವುದನ್ನು ರೈತ ಸಂಘಟನೆಯ ಮುಖಂಡ ಹನುಮಂತಪ್ಪ ಕಬ್ಬಾರ ತೀವ್ರವಾಗಿ ಖಂಡಿಸಿದ್ದಾರೆ. ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಈ ಕ್ರಮದಿಂದ ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆಯಾಗುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಪ್ರಸ್ತುತ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಜರುಗುತ್ತಿದ್ದು, ಶನಿವಾರವೂ ಪರೀಕ್ಷೆ ನಿಗದಿಯಾಗಿದೆ. ಇಂತಹ ಸಂದರ್ಭದಲ್ಲಿ ಹಳ್ಳಿಗಳಿಗೆ…

Read More

ಕಂಪ್ಲಿ ಉತ್ಸವಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ: ಕ್ಷೇತ್ರಕ್ಕೆ 3 ಸಾವಿರ ಹೊಸ ಮನೆಗಳ ಭರ್ಜರಿ ಕೊಡುಗೆ

ಬಳ್ಳಾರಿ: “ಕಂಪ್ಲಿ ವಿಧಾನಸಭಾ ಕ್ಷೇತ್ರದ ವಸತಿ ರಹಿತರ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ 2 ಸಾವಿರ ಮನೆಗಳನ್ನು ನೀಡಲಾಗಿತ್ತು. ಈಗ ಬರುವ ಹೊಸ ಆರ್ಥಿಕ ಸಾಲಿಗೆ ಹೆಚ್ಚುವರಿಯಾಗಿ 3 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುವುದು. ಈ ಮೂಲಕ ಕೇವಲ ಎರಡೂವರೆ ವರ್ಷಗಳಲ್ಲಿ ಒಟ್ಟು 5 ಸಾವಿರ ಮನೆಗಳನ್ನು ಈ ಕ್ಷೇತ್ರಕ್ಕೆ ವಿತರಿಸಿದಂತಾಗುತ್ತದೆ” ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್…

Read More

​ಕಂಚಾರಗಟ್ಟಿ ಸರ್ಕಾರಿ ಉರ್ದು ಶಾಲೆಗೆ ಶಾಸಕ ರುದ್ರಪ್ಪ ಲಮಾಣಿ ಅವರಿಂದ ಎರಡು ಹೊಸ ಕೊಠಡಿಗಳ ಕೊಡುಗೆ: ಸುವರ್ಣ ಮಹೋತ್ಸವ ಸಡಗರ

ಹಾವೇರಿ: ತಾಲೂಕಿನ ಕಂಚಾರಗಟ್ಟಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು. ಈ ಐತಿಹಾಸಿಕ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳು ಹಾಗೂ ಹಾವೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರು ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಹೊಸದಾಗಿ ಎರಡು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿರುವುದಾಗಿ ಘೋಷಿಸಿ ಗ್ರಾಮಸ್ಥರ ಹರ್ಷಕ್ಕೆ ಕಾರಣರಾದರು. ​ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್…

Read More

ಮಲೆ ಮಹದೇಶ್ವರ ಬೆಟ್ಟದ ಪಾದಯಾತ್ರಿಗಳಿಗೆ ಪ್ರಸಾದ ವಿನಿಯೋಗ: ರಾಮನಗರ ಸಿಲ್ಕ್ ಸಿಟಿ ವತಿಯಿಂದ ಅನ್ನದಾಸೋಹ

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಸಾವಿರಾರು ಭಕ್ತಾದಿಗಳ ಸೇವೆಗಾಗಿ ರಾಮನಗರದ ಸಿಲ್ಕ್ ಸಿಟಿ ವತಿಯಿಂದ ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಹಮ್ಮಿಕೊಂಡಿರುವ ಪ್ರಸಾದ ವಿನಿಯೋಗ ಹಾಗೂ ಅನ್ನದಾಸೋಹ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಜರುಗುತ್ತಿದೆ ಎಂದು ಸಿಲ್ಕ್ ಸಿಟಿ ಅಧ್ಯಕ್ಷರಾದ ಪ್ರಕಾಶ್ ವಿ. ತಿಳಿಸಿದ್ದಾರೆ. ಫೆಬ್ರವರಿ 10ರಿಂದ ಆರಂಭವಾಗಿರುವ ಈ ಸೇವಾ ಕಾರ್ಯಕ್ರಮವು ಫೆಬ್ರವರಿ 13ರವರೆಗೆ ಸತತ ನಾಲ್ಕು ದಿನಗಳ ಕಾಲ ನಿರಂತರವಾಗಿ ನಡೆಯಲಿದ್ದು, ಪಾದಯಾತ್ರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ​ಮಲ್ಲಯ್ಯನಪುರ ಗ್ರಾಮದ…

Read More

ದಾವಣಗೆರೆ ಜಿಲ್ಲೆಯ ನೂತನ ಎಸ್‌ಪಿಯಾಗಿ ಶೇಖರ್ ತೆಕ್ಕಣ್ಣನವರ್ ಅಧಿಕಾರ ಸ್ವೀಕಾರ

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಶೇಖರ್ ಹೆಚ್. ತೆಕ್ಕಣ್ಣನವರ್ ಅವರು ಬುಧವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ನೂತನ ಎಸ್‌ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೂರ್ವವಲಯ ಐಜಿಪಿ ಡಾ. ರವಿಕಾಂತೇ ಗೌಡ ಅವರು ಪುಷ್ಪಗುಚ್ಛ ನೀಡಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ​ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶೇಖರ್ ತೆಕ್ಕಣ್ಣನವರ್ ಅವರು, ದಾವಣಗೆರೆ…

Read More

ಗುರುವಂದನೆ ಸಲ್ಲಿಸಿ ಶಿಷ್ಯತ್ವದ ಋಣ ತೀರಿಸಿದ ಕಾಕೋಳದ 2000-01 ನೆ ಸಾಲಿನ ಹಳೆ ವಿದ್ಯಾರ್ಥಿಗಳು: ಗ್ರಾಮದಲ್ಲಿ ಅದ್ದೂರಿ ಸ್ನೇಹ ಸಮ್ಮಿಲನ

ರಾಣೇಬೆನ್ನೂರ : ತಾಲೂಕಿನ ಕಾಕೋಳ ಗ್ರಾಮದಲ್ಲಿ ರವಿವಾರದಂದು ಗುರುವಿನ ಮೇಲಿನ ಅಪ್ರತಿಮ ಭಕ್ತಿ ಹಾಗೂ ಗೆಳೆಯರೊಂದಿಗಿನ ಬಾಂಧವ್ಯದ ಅಪರೂಪದ ಸಂಗಮವೊಂದು ಸಾಕ್ಷಿಯಾಯಿತು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2000-01ನೇ ಸಾಲಿನ 7ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶ್ರೀ ಬೀರೇಶ್ವರ ಪ್ರೌಢ ಶಾಲೆಯ 2003-04ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಶ್ರೀ ಬೀರೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ,…

Read More