ರೋಣ ಬಳಿ ಭೀಕರ ಅಪಘಾತ: ಮೂವರು ಮಹಿಳಾ ಕೃಷಿ ಕಾರ್ಮಿಕರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ
ರೋಣ: ತಾಲ್ಲೂಕಿನ ಜಿಗಳೂರ ಕ್ರಾಸ್ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾಹಕ ಘಟನೆ ನಡೆದಿದೆ. ಟಾಟಾ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಪ್ಯಾಸೆಂಜರ್ ಕ್ರೂಸರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದೆ. ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ನಿವಾಸಿಗಳಾದ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45) ಹಾಗೂ ಸುಜಾತಾ ರಾಜಪ್ಪ ಹೊಸಮನಿ…

